ಮಂಗಳೂರು(ದಕ್ಷಿಣ ಕನ್ನಡ): ಕರಾವಳಿಯಲ್ಲಿ ಉತ್ತುಂಗದ ಕಾಲದಲ್ಲಿಯೇ ಮೀನುಗಾರರಿಗೆ ಸಂಕಷ್ಟ ಎದುರಾಗಿದೆ. ಸಾಮಾನ್ಯವಾಗಿ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸಮುದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬೋಟ್ಗಳು ತೆರಳುವ ಕಾಲವಾಗಿದ್ದರೂ, ಈ ಬಾರಿ ಪರಿಸ್ಥಿತಿ ಭಿನ್ನ. ಮೀನುಗಳು ಕಡಿಮೆಯಾಗಿರುವುದು, ಇಂಧನ ಮತ್ತು ಗ್ಯಾಸ್ ಸರಬರಾಜಿನ ಅಡಚಣೆ ಸೇರಿದಂತೆ ಹಲವು ಕಾರಣಗಳಿಂದಾಗಿ ಹಲವಾರು ಬೋಟ್ಗಳು ಸಮುದ್ರಕ್ಕೆ ತೆರಳದೇ ನಿಂತಿವೆ. ಇದೀಗ ಮಂಗಳೂರು ಧಕ್ಕೆಯಲ್ಲಿ ಶೇಕಡ 85ರಷ್ಟು ಬೋಟ್ಗಳು ಮೀನುಗಾರಿಕೆ ನಿಲ್ಲಿಸಿವೆ.
ಇದನ್ನೂ ಓದಿ:
ಕೆಲ ದಿನಗಳ ಹಿಂದೆ ಮೀನುಗಾರಿಕೆಯ ಬಂಕ್ಗಳಲ್ಲಿ ಉಂಟಾದ ಡೀಸೆಲ್ ಸರಬರಾಜಿನ ಸಮಸ್ಯೆ ಕೂಡ ಮೀನುಗಾರಿಕೆಗೆ ಹೊಡೆತ ನೀಡಿತ್ತು. ಆ ಸಮಸ್ಯೆ ಇದೀಗ ಬಹುತೇಕ ಸರಿಯಾಗಿದ್ದರೂ, ಅದರ ಪರಿಣಾಮವಾಗಿ ಕೆಲವು ಬೋಟ್ಗಳು ಸಮಯಕ್ಕೆ ಸರಿಯಾಗಿ ಸಮುದ್ರಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಮತ್ತೊಂದೆಡೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ಗಳಿಗೆ ಅಗತ್ಯವಾಗುವ ಅಡುಗೆ ಗ್ಯಾಸ್ ಕೊರತೆ ಕೂಡ ಪ್ರಮುಖ ಅಡ್ಡಿಯಾಗಿ ಪರಿಣಮಿಸಿದೆ.
ಮಂಗಳೂರು ಟ್ರಾಲ್ ಬೋಟ್ ಅಸೋಸಿಯೇಷನ್ ಅಧ್ಯಕ್ಷ ಚೇತನ್ ಬೆಂಗ್ರೆ ಅವರು ಮಾತನಾಡಿ, “ಸಾಮಾನ್ಯವಾಗಿ ನೂರು ಪ್ರತಿಶತ ಬೋಟ್ಗಳು ಸಮುದ್ರಕ್ಕೆ ತೆರಳುತ್ತಿದ್ದವು. ಈಗ ಸುಮಾರು 15 ಪ್ರತಿಶತ ಬೋಟ್ಗಳು ಮಾತ್ರ ತೆರಳುತ್ತಿವೆ. ಸಮುದ್ರದ ನೀರಿನ ತಾಪಮಾನ ಮತ್ತು ಜಾಗತಿಕ ಹವಾಮಾನ ಬದಲಾವಣೆ ಪರಿಣಾಮವಾಗಿ ಮೀನುಗಳ ಲಭ್ಯತೆ ಕಡಿಮೆಯಾಗಿದೆ. ಕೆಲ ದಿನಗಳ ಇಂಧನ ಮತ್ತು ಗ್ಯಾಸ್ ಸಮಸ್ಯೆಯೂ ಇದಕ್ಕೆ ಕಾರಣವಾಗಿದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…