ಮಂಗಳೂರು(ದಕ್ಷಿಣ ಕನ್ನಡ): ಕರಾವಳಿಯಲ್ಲಿ ಉತ್ತುಂಗದ ಕಾಲದಲ್ಲಿಯೇ ಮೀನುಗಾರರಿಗೆ ಸಂಕಷ್ಟ ಎದುರಾಗಿದೆ. ಸಾಮಾನ್ಯವಾಗಿ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸಮುದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬೋಟ್ಗಳು ತೆರಳುವ ಕಾಲವಾಗಿದ್ದರೂ, ಈ ಬಾರಿ ಪರಿಸ್ಥಿತಿ ಭಿನ್ನ. ಮೀನುಗಳು ಕಡಿಮೆಯಾಗಿರುವುದು, ಇಂಧನ ಮತ್ತು ಗ್ಯಾಸ್ ಸರಬರಾಜಿನ ಅಡಚಣೆ ಸೇರಿದಂತೆ ಹಲವು ಕಾರಣಗಳಿಂದಾಗಿ ಹಲವಾರು ಬೋಟ್ಗಳು ಸಮುದ್ರಕ್ಕೆ ತೆರಳದೇ ನಿಂತಿವೆ. ಇದೀಗ ಮಂಗಳೂರು ಧಕ್ಕೆಯಲ್ಲಿ ಶೇಕಡ 85ರಷ್ಟು ಬೋಟ್ಗಳು ಮೀನುಗಾರಿಕೆ ನಿಲ್ಲಿಸಿವೆ.
ಇದನ್ನೂ ಓದಿ:
ಕೆಲ ದಿನಗಳ ಹಿಂದೆ ಮೀನುಗಾರಿಕೆಯ ಬಂಕ್ಗಳಲ್ಲಿ ಉಂಟಾದ ಡೀಸೆಲ್ ಸರಬರಾಜಿನ ಸಮಸ್ಯೆ ಕೂಡ ಮೀನುಗಾರಿಕೆಗೆ ಹೊಡೆತ ನೀಡಿತ್ತು. ಆ ಸಮಸ್ಯೆ ಇದೀಗ ಬಹುತೇಕ ಸರಿಯಾಗಿದ್ದರೂ, ಅದರ ಪರಿಣಾಮವಾಗಿ ಕೆಲವು ಬೋಟ್ಗಳು ಸಮಯಕ್ಕೆ ಸರಿಯಾಗಿ ಸಮುದ್ರಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಮತ್ತೊಂದೆಡೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ಗಳಿಗೆ ಅಗತ್ಯವಾಗುವ ಅಡುಗೆ ಗ್ಯಾಸ್ ಕೊರತೆ ಕೂಡ ಪ್ರಮುಖ ಅಡ್ಡಿಯಾಗಿ ಪರಿಣಮಿಸಿದೆ.
ಮಂಗಳೂರು ಟ್ರಾಲ್ ಬೋಟ್ ಅಸೋಸಿಯೇಷನ್ ಅಧ್ಯಕ್ಷ ಚೇತನ್ ಬೆಂಗ್ರೆ ಅವರು ಮಾತನಾಡಿ, “ಸಾಮಾನ್ಯವಾಗಿ ನೂರು ಪ್ರತಿಶತ ಬೋಟ್ಗಳು ಸಮುದ್ರಕ್ಕೆ ತೆರಳುತ್ತಿದ್ದವು. ಈಗ ಸುಮಾರು 15 ಪ್ರತಿಶತ ಬೋಟ್ಗಳು ಮಾತ್ರ ತೆರಳುತ್ತಿವೆ. ಸಮುದ್ರದ ನೀರಿನ ತಾಪಮಾನ ಮತ್ತು ಜಾಗತಿಕ ಹವಾಮಾನ ಬದಲಾವಣೆ ಪರಿಣಾಮವಾಗಿ ಮೀನುಗಳ ಲಭ್ಯತೆ ಕಡಿಮೆಯಾಗಿದೆ. ಕೆಲ ದಿನಗಳ ಇಂಧನ ಮತ್ತು ಗ್ಯಾಸ್ ಸಮಸ್ಯೆಯೂ ಇದಕ್ಕೆ ಕಾರಣವಾಗಿದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…