ಮಂಗಳೂರು: ನಾಳೆ ಚುನಾವಣಾ ಮತ ಎಣಿಕೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಯಾಗಿದೆ.
ಮಂಗಳೂರು ನಗರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾನೂನು ಉಲ್ಲಂಘಿಸಿದರೆ ಅಥವಾ ವಿಜಯೋತ್ಸವ ಮಾಡಿದರೆ ಮುಲಾಜಿಲ್ಲದೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಇಂದು ಮಧ್ಯರಾತ್ರಿಯಿಂದ 16ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಾಗಿದ್ದು, ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಾಗಲಿದೆ. ಜಿಲ್ಲೆಯಲ್ಲಿ ಇಂದು ಮಧ್ಯ ರಾತ್ರಿಯಿಂದ ನಾಳೆ ಮಧ್ಯರಾತ್ರಿ ವರೆಗೂ ಮದ್ಯಮಾರಾಟವನ್ನು ಕೂಡ ನಿಷೇಧವಾಗಲಿದೆ ಅಂದ್ರು.
ಉಡುಪಿ
ಮೇ.15 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮೇ 15ರ ಬೆಳಿಗ್ಗೆ ಗಂಟೆ 6 ರಿಂದ 17ರ ಬೆಳಿಗ್ಗೆ ಗಂಟೆ 6 ರವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು ಯಾವುದೇ ಸಭೆ ಸಮಾರಂಭ, ವಿಜಯೋತ್ಸವ, ಮೆರವಣಿಗೆ ಮಾಡುವುದು, ಪರ ಹಾಗೂ ವಿರೋಧ ಘೋಷಣೆ ಕೂಗುವುದು, ಗುಂಪು ಸೇರುವುದು ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ನೀಡಿದ್ದಾರೆ.
ಗೆಲವು ಸಾಧಿಸಿದ ಹಾಗೂ ಸೋತ ಪಕ್ಷಗಳ ನಡುವೆ ಗೊಂದಲ ಉಂಟಾಗಿ ಗಲಭೆ ನಡೆಯುವ ಸಾಧ್ಯತೆಗಳಬಗ್ಗೆ ಉಡುಪಿ ಜಿಲ್ಲಾ ಎಸ್ಪಿ ನೀಡಿದ ವರದಿಯಂತೆ ಈ ಆದೇಶ ಮಾಡಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…