ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧ : ಕೆ.ಎಸ್.ಈಶ್ವರಪ್ಪ -Vishwanews24

ಶಿವಮೊಗ್ಗ: ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧವೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿಯವರು ಭೂಮಿ ಪೂಜೆ ನೆರವೇರಿಸಿದ್ದು, ಈಡಿ ವಿಶ್ವವೇ ಸಂತಸ ಪಡುವ ದಿನ. ಈ ವೇಳೆ ನಾನು ಕಾಶಿ ಮತ್ತು ಮಥುರಾದಲ್ಲಿ ಮಸೀದಿ ತೆರವುಗೊಳಿಸಿ ದೇಗುಲ ನಿರ್ಮಿಸಬೇಕೆಂಬ ಎಂಬ ಹೇಳಿಕೆ ನೀಡಿದ್ದು, ಅದು ನನ್ನ ಮನಸ್ಸಿನ ಭಾವನೆ. ಆದರೆ ನನ್ನ ಹೇಳಿಕೆಯನ್ನು ಹೈದರಾಬಾದ್‍ನ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧಿಸುವ ಮೂಲಕ ರಾಜಕಾರಣ ಮಾಡಲು ಹೊರಟ್ಟಿದ್ದಾರೆ ಎಂದರು.

ನಾನು ಅಂದು ಅನೇಕ ಹಿಂದೂಗಳ ಭಾವನೆಯ ಪ್ರತಿನಿಧಿಯಾಗಿ ಹಾಗೂ ನನ್ನ ಸ್ವಂತ ಅನಿಸಿಕೆಯನ್ನು ಮಾಧ್ಯಮದ ಮೂಲಕ ನಾಡಿನ ಜನತೆಗೆ ವ್ಯಕ್ತಪಡಿಸಿದ್ದೇನೆ. ಡಿಕೆಶಿಯವರು ರಾಜಕೀಯ ಮಾಡುವ ಮೂಲಕ ನನ್ನನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಹೇಳಿದ್ದಾರೆ. ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧವೆಂದು ಹೇಳಿದರು.

ನಾನು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿಲ್ಲ. ನಾನು ನನ್ನ ಮನಸ್ಸಿನ ಭಾವನೆಯನ್ನ ತಿಳಿಸಿದ್ದೇನೆ. ಆದರೆ ಸಂಸದ ಓವೈಸಿಯವರು, ಈಶ್ವರಪ್ಪನವರ ಹೇಳಿಕೆ ಹಿಂದೆ ಆರ್‌ಎಸ್‌ಎಸ್‌ ಇದೆ. ಆರ್‌ಎಸ್‌ಎಸ್‌ ನಾಳೆ ಇದನ್ನು ಆಂದೋಲನದ ರೀತಿ ಧರ್ಮ ಸಂಸತ್ ನಡೆಸಿ ಕಾನೂನು ಬದಲಾವಣೆ ತಂದು, ದೇಗುಲ ನಿರ್ಮಿಸಿ ಜನರ ಭಾವನೆಯೊಂದಿಗೆ ಆಟವಾಡುತ್ತಾರೆ ಎಂದು ಹೇಳಿದ್ದಾರೆ. ನನ್ನ ದೇಹದಲ್ಲಿ ಆಆರ್‌ಎಸ್‌ಎಸ್‌ ರಕ್ತ ಇದೆ ನಿಜ. ನಾನು ಇನ್ನೊಬ್ಬರ ಮಾತು ಕೇಳಿ ಮಾತನಾಡುವವನಲ್ಲ. ಆದರೆ ಆ ದಿನ ನಾನು ನನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದರು.

 

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

21 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

32 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

39 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

56 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago