ಶಿವಮೊಗ್ಗ: ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧವೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿಯವರು ಭೂಮಿ ಪೂಜೆ ನೆರವೇರಿಸಿದ್ದು, ಈಡಿ ವಿಶ್ವವೇ ಸಂತಸ ಪಡುವ ದಿನ. ಈ ವೇಳೆ ನಾನು ಕಾಶಿ ಮತ್ತು ಮಥುರಾದಲ್ಲಿ ಮಸೀದಿ ತೆರವುಗೊಳಿಸಿ ದೇಗುಲ ನಿರ್ಮಿಸಬೇಕೆಂಬ ಎಂಬ ಹೇಳಿಕೆ ನೀಡಿದ್ದು, ಅದು ನನ್ನ ಮನಸ್ಸಿನ ಭಾವನೆ. ಆದರೆ ನನ್ನ ಹೇಳಿಕೆಯನ್ನು ಹೈದರಾಬಾದ್ನ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧಿಸುವ ಮೂಲಕ ರಾಜಕಾರಣ ಮಾಡಲು ಹೊರಟ್ಟಿದ್ದಾರೆ ಎಂದರು.
ನಾನು ಅಂದು ಅನೇಕ ಹಿಂದೂಗಳ ಭಾವನೆಯ ಪ್ರತಿನಿಧಿಯಾಗಿ ಹಾಗೂ ನನ್ನ ಸ್ವಂತ ಅನಿಸಿಕೆಯನ್ನು ಮಾಧ್ಯಮದ ಮೂಲಕ ನಾಡಿನ ಜನತೆಗೆ ವ್ಯಕ್ತಪಡಿಸಿದ್ದೇನೆ. ಡಿಕೆಶಿಯವರು ರಾಜಕೀಯ ಮಾಡುವ ಮೂಲಕ ನನ್ನನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಹೇಳಿದ್ದಾರೆ. ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧವೆಂದು ಹೇಳಿದರು.
ನಾನು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿಲ್ಲ. ನಾನು ನನ್ನ ಮನಸ್ಸಿನ ಭಾವನೆಯನ್ನ ತಿಳಿಸಿದ್ದೇನೆ. ಆದರೆ ಸಂಸದ ಓವೈಸಿಯವರು, ಈಶ್ವರಪ್ಪನವರ ಹೇಳಿಕೆ ಹಿಂದೆ ಆರ್ಎಸ್ಎಸ್ ಇದೆ. ಆರ್ಎಸ್ಎಸ್ ನಾಳೆ ಇದನ್ನು ಆಂದೋಲನದ ರೀತಿ ಧರ್ಮ ಸಂಸತ್ ನಡೆಸಿ ಕಾನೂನು ಬದಲಾವಣೆ ತಂದು, ದೇಗುಲ ನಿರ್ಮಿಸಿ ಜನರ ಭಾವನೆಯೊಂದಿಗೆ ಆಟವಾಡುತ್ತಾರೆ ಎಂದು ಹೇಳಿದ್ದಾರೆ. ನನ್ನ ದೇಹದಲ್ಲಿ ಆಆರ್ಎಸ್ಎಸ್ ರಕ್ತ ಇದೆ ನಿಜ. ನಾನು ಇನ್ನೊಬ್ಬರ ಮಾತು ಕೇಳಿ ಮಾತನಾಡುವವನಲ್ಲ. ಆದರೆ ಆ ದಿನ ನಾನು ನನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…