ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧ : ಕೆ.ಎಸ್.ಈಶ್ವರಪ್ಪ -Vishwanews24

ಶಿವಮೊಗ್ಗ: ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧವೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿಯವರು ಭೂಮಿ ಪೂಜೆ ನೆರವೇರಿಸಿದ್ದು, ಈಡಿ ವಿಶ್ವವೇ ಸಂತಸ ಪಡುವ ದಿನ. ಈ ವೇಳೆ ನಾನು ಕಾಶಿ ಮತ್ತು ಮಥುರಾದಲ್ಲಿ ಮಸೀದಿ ತೆರವುಗೊಳಿಸಿ ದೇಗುಲ ನಿರ್ಮಿಸಬೇಕೆಂಬ ಎಂಬ ಹೇಳಿಕೆ ನೀಡಿದ್ದು, ಅದು ನನ್ನ ಮನಸ್ಸಿನ ಭಾವನೆ. ಆದರೆ ನನ್ನ ಹೇಳಿಕೆಯನ್ನು ಹೈದರಾಬಾದ್‍ನ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧಿಸುವ ಮೂಲಕ ರಾಜಕಾರಣ ಮಾಡಲು ಹೊರಟ್ಟಿದ್ದಾರೆ ಎಂದರು.

ನಾನು ಅಂದು ಅನೇಕ ಹಿಂದೂಗಳ ಭಾವನೆಯ ಪ್ರತಿನಿಧಿಯಾಗಿ ಹಾಗೂ ನನ್ನ ಸ್ವಂತ ಅನಿಸಿಕೆಯನ್ನು ಮಾಧ್ಯಮದ ಮೂಲಕ ನಾಡಿನ ಜನತೆಗೆ ವ್ಯಕ್ತಪಡಿಸಿದ್ದೇನೆ. ಡಿಕೆಶಿಯವರು ರಾಜಕೀಯ ಮಾಡುವ ಮೂಲಕ ನನ್ನನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಹೇಳಿದ್ದಾರೆ. ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧವೆಂದು ಹೇಳಿದರು.

ನಾನು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿಲ್ಲ. ನಾನು ನನ್ನ ಮನಸ್ಸಿನ ಭಾವನೆಯನ್ನ ತಿಳಿಸಿದ್ದೇನೆ. ಆದರೆ ಸಂಸದ ಓವೈಸಿಯವರು, ಈಶ್ವರಪ್ಪನವರ ಹೇಳಿಕೆ ಹಿಂದೆ ಆರ್‌ಎಸ್‌ಎಸ್‌ ಇದೆ. ಆರ್‌ಎಸ್‌ಎಸ್‌ ನಾಳೆ ಇದನ್ನು ಆಂದೋಲನದ ರೀತಿ ಧರ್ಮ ಸಂಸತ್ ನಡೆಸಿ ಕಾನೂನು ಬದಲಾವಣೆ ತಂದು, ದೇಗುಲ ನಿರ್ಮಿಸಿ ಜನರ ಭಾವನೆಯೊಂದಿಗೆ ಆಟವಾಡುತ್ತಾರೆ ಎಂದು ಹೇಳಿದ್ದಾರೆ. ನನ್ನ ದೇಹದಲ್ಲಿ ಆಆರ್‌ಎಸ್‌ಎಸ್‌ ರಕ್ತ ಇದೆ ನಿಜ. ನಾನು ಇನ್ನೊಬ್ಬರ ಮಾತು ಕೇಳಿ ಮಾತನಾಡುವವನಲ್ಲ. ಆದರೆ ಆ ದಿನ ನಾನು ನನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago