ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧ : ಕೆ.ಎಸ್.ಈಶ್ವರಪ್ಪ -Vishwanews24

ಶಿವಮೊಗ್ಗ: ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧವೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿಯವರು ಭೂಮಿ ಪೂಜೆ ನೆರವೇರಿಸಿದ್ದು, ಈಡಿ ವಿಶ್ವವೇ ಸಂತಸ ಪಡುವ ದಿನ. ಈ ವೇಳೆ ನಾನು ಕಾಶಿ ಮತ್ತು ಮಥುರಾದಲ್ಲಿ ಮಸೀದಿ ತೆರವುಗೊಳಿಸಿ ದೇಗುಲ ನಿರ್ಮಿಸಬೇಕೆಂಬ ಎಂಬ ಹೇಳಿಕೆ ನೀಡಿದ್ದು, ಅದು ನನ್ನ ಮನಸ್ಸಿನ ಭಾವನೆ. ಆದರೆ ನನ್ನ ಹೇಳಿಕೆಯನ್ನು ಹೈದರಾಬಾದ್‍ನ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧಿಸುವ ಮೂಲಕ ರಾಜಕಾರಣ ಮಾಡಲು ಹೊರಟ್ಟಿದ್ದಾರೆ ಎಂದರು.

ನಾನು ಅಂದು ಅನೇಕ ಹಿಂದೂಗಳ ಭಾವನೆಯ ಪ್ರತಿನಿಧಿಯಾಗಿ ಹಾಗೂ ನನ್ನ ಸ್ವಂತ ಅನಿಸಿಕೆಯನ್ನು ಮಾಧ್ಯಮದ ಮೂಲಕ ನಾಡಿನ ಜನತೆಗೆ ವ್ಯಕ್ತಪಡಿಸಿದ್ದೇನೆ. ಡಿಕೆಶಿಯವರು ರಾಜಕೀಯ ಮಾಡುವ ಮೂಲಕ ನನ್ನನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಹೇಳಿದ್ದಾರೆ. ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧವೆಂದು ಹೇಳಿದರು.

ನಾನು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿಲ್ಲ. ನಾನು ನನ್ನ ಮನಸ್ಸಿನ ಭಾವನೆಯನ್ನ ತಿಳಿಸಿದ್ದೇನೆ. ಆದರೆ ಸಂಸದ ಓವೈಸಿಯವರು, ಈಶ್ವರಪ್ಪನವರ ಹೇಳಿಕೆ ಹಿಂದೆ ಆರ್‌ಎಸ್‌ಎಸ್‌ ಇದೆ. ಆರ್‌ಎಸ್‌ಎಸ್‌ ನಾಳೆ ಇದನ್ನು ಆಂದೋಲನದ ರೀತಿ ಧರ್ಮ ಸಂಸತ್ ನಡೆಸಿ ಕಾನೂನು ಬದಲಾವಣೆ ತಂದು, ದೇಗುಲ ನಿರ್ಮಿಸಿ ಜನರ ಭಾವನೆಯೊಂದಿಗೆ ಆಟವಾಡುತ್ತಾರೆ ಎಂದು ಹೇಳಿದ್ದಾರೆ. ನನ್ನ ದೇಹದಲ್ಲಿ ಆಆರ್‌ಎಸ್‌ಎಸ್‌ ರಕ್ತ ಇದೆ ನಿಜ. ನಾನು ಇನ್ನೊಬ್ಬರ ಮಾತು ಕೇಳಿ ಮಾತನಾಡುವವನಲ್ಲ. ಆದರೆ ಆ ದಿನ ನಾನು ನನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

24 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago