Featured

ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಿಸಲೇಬೇಕು ರಾಜ್ಯ ಸರ್ಕಾರದಿಂದ ಸೂಚನೆ – Vishwanews24

ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಿಸಲೇಬೇಕು ರಾಜ್ಯ ಸರ್ಕಾರದಿಂದ ಸೂಚನೆ

ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು, ವಿವಿಗಳಲ್ಲಿ ಕಡ್ಡಾಯವಾಗಿ ತಿರಂಗ ಹಾರಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.

ಶಾಲಾ ಶಿಕ್ಷಣ ಇಲಾಖೆ ಕೂಡ ಮಹತ್ವದ ಆದೇಶ ಹೊರಡಿಸಲು ಮುಂದಾಗಿದೆ. ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17ರ ವರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ.

ಸರ್ಕಾರಿ, ಅನುದಾನಿತ, ಅನದಾನ ರಹಿತ ಶಾಲಾ-ಕಾಲೇಜುಗಳು, ಎಲ್ಲಾ ಮದರಸಾಗಳು ಈ ಅದೇಶವನ್ನು ಪಾಲಿಸಬೇಕು. ತ್ರಿವರ್ಣ ಧ್ವಜದ ಜೊತೆಗೆ ಶಾಲೆ, ಕಾಲೇಜು, ಮದರಸಾಗಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ ಮೆಲುಕು ಹಾಕುವ ಗೀತ ಗಾಯನ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ನಡೆಸಬೇಕು. ಕ್ವಿಜ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜನೆ ಮಾಡಬೇಕು ಎಂದು ಸೂಚಿಸುವಂತೆ ಹೇಳಿದ್ದಾರೆ. ಮುಖ್ಯವಾಗಿ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚನೆ ನೀಡಲಾಗುತ್ತಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago