Featured

ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಿಸಲೇಬೇಕು ರಾಜ್ಯ ಸರ್ಕಾರದಿಂದ ಸೂಚನೆ – Vishwanews24

ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಿಸಲೇಬೇಕು ರಾಜ್ಯ ಸರ್ಕಾರದಿಂದ ಸೂಚನೆ

ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು, ವಿವಿಗಳಲ್ಲಿ ಕಡ್ಡಾಯವಾಗಿ ತಿರಂಗ ಹಾರಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.

ಶಾಲಾ ಶಿಕ್ಷಣ ಇಲಾಖೆ ಕೂಡ ಮಹತ್ವದ ಆದೇಶ ಹೊರಡಿಸಲು ಮುಂದಾಗಿದೆ. ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17ರ ವರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ.

ಸರ್ಕಾರಿ, ಅನುದಾನಿತ, ಅನದಾನ ರಹಿತ ಶಾಲಾ-ಕಾಲೇಜುಗಳು, ಎಲ್ಲಾ ಮದರಸಾಗಳು ಈ ಅದೇಶವನ್ನು ಪಾಲಿಸಬೇಕು. ತ್ರಿವರ್ಣ ಧ್ವಜದ ಜೊತೆಗೆ ಶಾಲೆ, ಕಾಲೇಜು, ಮದರಸಾಗಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ ಮೆಲುಕು ಹಾಕುವ ಗೀತ ಗಾಯನ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ನಡೆಸಬೇಕು. ಕ್ವಿಜ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜನೆ ಮಾಡಬೇಕು ಎಂದು ಸೂಚಿಸುವಂತೆ ಹೇಳಿದ್ದಾರೆ. ಮುಖ್ಯವಾಗಿ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚನೆ ನೀಡಲಾಗುತ್ತಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

4 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

4 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

4 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

5 hours ago