Featured

ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಿಸಲೇಬೇಕು ರಾಜ್ಯ ಸರ್ಕಾರದಿಂದ ಸೂಚನೆ – Vishwanews24

ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಿಸಲೇಬೇಕು ರಾಜ್ಯ ಸರ್ಕಾರದಿಂದ ಸೂಚನೆ

ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು, ವಿವಿಗಳಲ್ಲಿ ಕಡ್ಡಾಯವಾಗಿ ತಿರಂಗ ಹಾರಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.

ಶಾಲಾ ಶಿಕ್ಷಣ ಇಲಾಖೆ ಕೂಡ ಮಹತ್ವದ ಆದೇಶ ಹೊರಡಿಸಲು ಮುಂದಾಗಿದೆ. ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17ರ ವರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ.

ಸರ್ಕಾರಿ, ಅನುದಾನಿತ, ಅನದಾನ ರಹಿತ ಶಾಲಾ-ಕಾಲೇಜುಗಳು, ಎಲ್ಲಾ ಮದರಸಾಗಳು ಈ ಅದೇಶವನ್ನು ಪಾಲಿಸಬೇಕು. ತ್ರಿವರ್ಣ ಧ್ವಜದ ಜೊತೆಗೆ ಶಾಲೆ, ಕಾಲೇಜು, ಮದರಸಾಗಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ ಮೆಲುಕು ಹಾಕುವ ಗೀತ ಗಾಯನ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ನಡೆಸಬೇಕು. ಕ್ವಿಜ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜನೆ ಮಾಡಬೇಕು ಎಂದು ಸೂಚಿಸುವಂತೆ ಹೇಳಿದ್ದಾರೆ. ಮುಖ್ಯವಾಗಿ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚನೆ ನೀಡಲಾಗುತ್ತಿದೆ.

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

4 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

6 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

7 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

7 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

7 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

7 hours ago