Featured

ಮದರಸ ಶಿಕ್ಷಣವನ್ನು ಬ್ಯಾನ್ ಮಾಡಿ ; ಘೋರ ಕೃತ್ಯಗಳು ಪದೇ ಪದೇ ಸಂಭವಿಸಲು ಮದರಸದಲ್ಲಿ ಸಿಗುತ್ತಿರುವ ಶಿಕ್ಷಣವೇ ಪ್ರಮುಖ ಕಾರಣ : ಶರಣ್ ಪಂಪ್‌ವೆಲ್ – Vishwanews24

ಮದರಸ ಶಿಕ್ಷಣವನ್ನು ಬ್ಯಾನ್ ಮಾಡಿ..

ಘೋರ ಕೃತ್ಯಗಳು ಪದೇ ಪದೇ ಸಂಭವಿಸಲು ಮದರಸದಲ್ಲಿ ಸಿಗುತ್ತಿರುವ ಶಿಕ್ಷಣವೇ ಪ್ರಮುಖ ಕಾರಣ ..

ಮಂಗಳೂರು: ಇವತ್ತು ದೇಶದಲ್ಲಿ ಹಿಂದೂಗಳ ಹತ್ಯೆ, ಪೊಲೀಸರ ಮೇಲೆ ದಾಳಿ,ರಸ್ತೆಗಳಲ್ಲಿ ಅಂಗಡಿಗಳಲ್ಲಿ, ಹಿಂದೂಗಳ ಮನೆಗಳ ಮೇಲೆ ದಾಳಿ ಇಂತಹ ಘೋರ ಕೃತ್ಯಗಳು ಪದೇ ಪದೇ ಸಂಭವಿಸುತ್ತಿರಲು ಅವರಿಗೆ ಮದರಸದಲ್ಲಿ ಸಿಗುತ್ತಿರುವ ಶಿಕ್ಷಣವೇ ಪ್ರಮುಖ ಕಾರಣ. ಆ ಶಿಕ್ಷಣ ಪಡೆದ ಯುವಕರು ಇಂದು ಹಿಂದೂಗಳ ವಿರುದ್ಧ ದಾಳಿ ಮಾಡುತ್ತಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ವಿಭಾಗೀಯ ಕಾರ್ಯದರ್ಶಿ ಶರಣ್‌ ಪಂಪ್ವೆಲ್‌ ಹೇಳಿದರು.

ರಾಜಸ್ಥಾನದ ಉದಯ್ ಪುರದಲ್ಲಿ ಕನ್ಹಯ್ಯಲಾಲ್ ಹತ್ಯೆಯನ್ನು ಖಂಡಿಸಿ ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಆಕ್ರೋಶ ಹೊರ ಹಾಕಿದ ಶರಣ್ ಪಂಪ್‌ವೆಲ್ “ಈ ದೇಶದಲ್ಲಿ ಸಾಕಷ್ಟು ಹಿಂದೂಗಳ ಹತ್ಯೆಯಾಗಿದೆ. ಆದ್ರೆ ನಿನ್ನೆ ರಾಜಸ್ಥಾನದ ಉದಯ್ ಪುರ್ ನಲ್ಲಿ ನಡೆದ ಅಮಾಯಕ ಹಿಂದೂವಿನ ಘೋರ ಹತ್ಯೆ ಬಹುಶಃ ನಾವು ಇದುವರೆಗೂ ನೋಡಿರದ ಒಂದು ದುರಂತವಾಗಿದೆ.

ಒಬ್ಬ ಅಮಾಯಕ ವ್ಯಾಪಾರಸ್ಥನ ಅಂಗಡಿಗೆ ವ್ಯಾಪಾರದ ಸೋಗಿನಲ್ಲಿ ಬಂದು ಮಾಂಸ ಕಡೀತ್ತಾರೆ ಅಷ್ಟೇ ಅಲ್ಲ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಂತೋಷ ವ್ಯಕ್ತಪಡಿಸುತ್ತಾರೆ ಎಂದರೆ ಯೋಚಿಸಿ ಅವರಲ್ಲಿ ಕ್ರೂರತೆ ಎಷ್ಟರ ಮಟ್ಟಿಗೆ ಇದೆ ಎಂಬುವುದು’.

ಇಸ್ಲಾಂ ಅಂದೆ ಶಾಂತಿಯ ಸಂಕೇತ.ಭಾರತ ದೇಶದಲ್ಲಿ ನಾವು ಶಾಂತಿಯಿಂದ ಬದುಕುವವರು. ಆದರೂ ನಮ್ಮನ್ನು ಉಗ್ರಗಾಮಿಗಳು ಎಂದು ಕರೆಯುತ್ತಾರೆ ಎಂದು ಈ ದೇಶದ ಮುಸಲ್ಮಾನರು ಪದೇ ಪದೇ ಹೇಳ್ತಾರೆ. ನಾವು ಅಂಬೇಡ್ಕರ್‌ ಅವರನ್ನು ಗೌರವಿಸುವವರು ಎಂದು ಹೇಳ್ತಾರೆ.

ಆದ್ರೆ ಇಸ್ಲಾಂ ಶಾಂತಿಯ ಸಂಕೇತ ಅಲ್ಲ. ಹಿಂಸೆಯ ದಾರಿ.ದೇಶದಲ್ಲಿ ಇಂದು ಅರಾಜಕತೆ ಸೃಷ್ಟಿಯಾಗುತ್ತಿದೆ. ನಮ್ಮ ದೈವಸ್ಥಾನಗಳ ಮೇಲೆ, ಹಿಂದೂ ಕಾರ್ಯಕರ್ತರ ಮೇಲೆ ದಾಳಿಯಾದ್ರೆ ಯಾರೂ ಪ್ರಶ್ನೆ ಮಾಡಲ್ಲ. ದೇಶದ ಎಲ್ಲಾ ಸಂತರು, ಸ್ವಾಮೀಜಿಗಳು ಯುವಕರಿಗೆ ಪ್ರೇರಣೆಯ ಸಂದೇಶ ಕೊಡಿ. ರಾಜಸ್ತಾನದ ಈ ಹತ್ಯೆಯನ್ನು ಎಲ್ಲಾ ಹಿಂದೂಗಳು ಖಂಡಿಸಬೇಕು. ಮೌನವನ್ನು ಮುರಿದು ಎಲ್ಲರೂ ಇದನ್ನು ಖಂಡನೆ ಮಾಡಬೇಕು’.

ಇವತ್ತು ನಾನು ಸರ್ಕಾರಕ್ಕೆ ಮನವಿ ಮಾಡುವುದು ಏನಂದ್ರೆ ಇಡೀ ದೇಶದಲ್ಲಿ ಜಾರಿಯಲ್ಲಿರುವ ಮದರಸ ಶಿಕ್ಷಣವನ್ನು ಬ್ಯಾನ್ ಮಾಡಿ ಇದು ನಮ್ಮ ಆಗ್ರಹವಾಗಿದೆ. ವೇದಿಕೆಗಳು, ಪ್ರತಿಭಟನೆಗಳು ಇದನ್ನೆಲ್ಲ ಬಿಟ್ಟು ಅವರ ಹಿಂಸೆಗೆ ನಾವು ಹಿಂಸೆಯ ಮೂಲಕವೇ ಉತ್ತರ ನೀಡಬೇಕಾದಲ್ಲಿ ಇನ್ನು ಮುಂದೆ ಕಾರ್ಯಕರ್ತರು ಅದಕ್ಕೂ ಕೂಡಾ ಸನ್ನದ್ಧರಾಗಬೇಕು’ ಎಂದು ಕಿಡಿಕಾರಿದರು.

ಅಷ್ಟೇ ಅಲ್ಲದೆ ಇವತ್ತು ದೇಶದಲ್ಲಿ ಸಂವಿಧಾನ, ಕಾನೂನು ಎಲ್ಲವೂ ನಮಗೆ ಮಾತ್ರ ಇದೆ ಎಂದು ಅನಿಸುತ್ತಿದೆ. ಕೇವಲ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದಕ್ಕೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ರು. ಆದ್ರೆ ಈ ಕೃತ್ಯಕ್ಕೆ ಏನು ಮಾಡಬೇಕು’ ಎಂದು ಪ್ರಶ್ನಿಸಿದರು.

ಈ ಸಂದರ್ಭ ರಾಜಸ್ಥಾನ ಮೂಲದ ಮೂವರು ವ್ಯಾಪಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಪ್ರತಿಭಟನೆಯಲ್ಲಿ ರಾಜಸ್ಥಾನದ ಉದಯ್ ಪುರ್ ನಲ್ಲಿ ಕಡಿದು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತ ಪಡಿಸಲಾಯಿತು.

ಪ್ರತಿಭಟನೆಯಲ್ಲಿ ವಿ.ಹೆಚ್.ಪಿಯ ಶಿವಾನಂದ್ ಮೆಂಡನ್, ಭುಜಂಗ ಕುಲಾಲ್. ಪ್ರದೀಪ್ ಸರಿಪಳ್ಳ, ದೇವಿಪ್ರಸಾದ್ ಶೆಟ್ಟಿ,ಪುನೀತ್ ಅತ್ತಾವರ್ , ಗೋಪಾಲ್ ಕುತ್ತಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

22 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

23 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

23 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

23 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

23 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago