Featured

ಮದುವೆಗೆ ಉಡುಗೊರೆಯಾಗಿ ಸಿಕಿದ್ದ ಹೋಮ್ ಥಿಯೇಟರ್ ಸಿಸ್ಟಮ್ ಸ್ಫೋಟ : ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ – Vishwanews24

ಮದುವೆಗೆ ಉಡುಗೊರೆಯಾಗಿ ಸಿಕಿದ್ದ ಹೋಮ್ ಥಿಯೇಟರ್ ಸಿಸ್ಟಮ್ ಸ್ಫೋಟ : ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಛತ್ತೀಸ್‌ಗಢ : ಛತ್ತೀಸ್‌ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಮದುವೆಯ ಉಡುಗೊರೆಯಾಗಿ ಪಡೆದಿದ್ದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಸ್ಫೋಟಗೊಂಡ ಪರಿಣಾಮ ನವವಿವಾಹಿತ ಹಾಗೂ ಆತನ ಹಿರಿಯ ಸಹೋದರ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.

ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ಸಿಸ್ಟಮ್ ಇರಿಸಲಾಗಿದ್ದ ಕೋಣೆಯ ಗೋಡೆಗಳು ಹಾಗೂ ಮೇಲ್ಛಾವಣಿ ಕುಸಿದು ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 1 ರಂದು 22 ವರ್ಷದ ಹೇಮೇಂದ್ರ ಮೆರಾವಿ ವಿವಾಹವಾಗಿದ್ದು, ಸೋಮವಾರ ಹೇಮೇಂದ್ರ ಹಾಗೂ ಇತರ ಕುಟುಂಬ ಸದಸ್ಯರು ತಮ್ಮ ಮನೆಯ ಕೋಣೆಯೊಳಗೆ ಮದುವೆಯ ಉಡುಗೊರೆಗಳನ್ನು ಹೊರ ತೆಗೆದಿದ್ದರು.

ಇನ್ನು ನವವಿವಾಹಿತ ಹೇಮೇಂದ್ರ ತನಗೆ ಗಿಫ್ಟ್ ಬಂದಿದ್ದ ಹೋಮ್ ಥಿಯೇಟರ್ ಸಿಸ್ಟಮ್ ವೈಯರ್ ರನ್ನು ಎಲೆಕ್ಟ್ರಿಕ್ ಬೋರ್ಡ್ ಗೆ ಸಿಕ್ಕಿಸಿ ಆನ್ ಮಾಡಿದಾಗ, ಭಾರೀ ಸ್ಫೋಟ ಸಂಭವಿಸಿದ್ದು ಹೇಮೇಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅವರ ಸಹೋದರ ರಾಜ್‌ಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ಇತರ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಕೌರಾದದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಚಿಕಿತ್ಸೆ ವೇಳೆ ಮೆರಾವಿ ಅವರ ಸಹೋದರ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ವಿಧಿವಿಜ್ಞಾನ ತಜ್ಞರೊಂದಿಗೆ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. ಕೊಠಡಿಯನ್ನು ಪರಿಶೀಲಿಸಿದಾಗ ಸ್ಫೋಟಕ್ಕೆ ಕಾರಣವಾಗುವ ಯಾವುದೇ ದಹನಕಾರಿ ವಸ್ತು ಪತ್ತೆಯಾಗಿಲ್ಲ ಎಂದು ರೆಂಗಾಖರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ದುರ್ಗೇಶ್ ರಾವ್ಟೆ ತಿಳಿಸಿದ್ದಾರೆ.

ಮ್ಯೂಸಿಕ್ ಸಿಸ್ಟಂ ಮಾತ್ರ ಕೋಣೆಯಲ್ಲಿ ಸ್ಫೋಟಗೊಂಡಿದ್ದು, ಸ್ಫೋಟಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ಅವರು ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 hour ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago