ಛತ್ತೀಸ್ಗಢ : ಛತ್ತೀಸ್ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಮದುವೆಯ ಉಡುಗೊರೆಯಾಗಿ ಪಡೆದಿದ್ದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಸ್ಫೋಟಗೊಂಡ ಪರಿಣಾಮ ನವವಿವಾಹಿತ ಹಾಗೂ ಆತನ ಹಿರಿಯ ಸಹೋದರ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ಸಿಸ್ಟಮ್ ಇರಿಸಲಾಗಿದ್ದ ಕೋಣೆಯ ಗೋಡೆಗಳು ಹಾಗೂ ಮೇಲ್ಛಾವಣಿ ಕುಸಿದು ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 1 ರಂದು 22 ವರ್ಷದ ಹೇಮೇಂದ್ರ ಮೆರಾವಿ ವಿವಾಹವಾಗಿದ್ದು, ಸೋಮವಾರ ಹೇಮೇಂದ್ರ ಹಾಗೂ ಇತರ ಕುಟುಂಬ ಸದಸ್ಯರು ತಮ್ಮ ಮನೆಯ ಕೋಣೆಯೊಳಗೆ ಮದುವೆಯ ಉಡುಗೊರೆಗಳನ್ನು ಹೊರ ತೆಗೆದಿದ್ದರು.
ಇನ್ನು ನವವಿವಾಹಿತ ಹೇಮೇಂದ್ರ ತನಗೆ ಗಿಫ್ಟ್ ಬಂದಿದ್ದ ಹೋಮ್ ಥಿಯೇಟರ್ ಸಿಸ್ಟಮ್ ವೈಯರ್ ರನ್ನು ಎಲೆಕ್ಟ್ರಿಕ್ ಬೋರ್ಡ್ ಗೆ ಸಿಕ್ಕಿಸಿ ಆನ್ ಮಾಡಿದಾಗ, ಭಾರೀ ಸ್ಫೋಟ ಸಂಭವಿಸಿದ್ದು ಹೇಮೇಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರ ಸಹೋದರ ರಾಜ್ಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ಇತರ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಕೌರಾದದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಚಿಕಿತ್ಸೆ ವೇಳೆ ಮೆರಾವಿ ಅವರ ಸಹೋದರ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿದ ಕೂಡಲೇ ವಿಧಿವಿಜ್ಞಾನ ತಜ್ಞರೊಂದಿಗೆ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. ಕೊಠಡಿಯನ್ನು ಪರಿಶೀಲಿಸಿದಾಗ ಸ್ಫೋಟಕ್ಕೆ ಕಾರಣವಾಗುವ ಯಾವುದೇ ದಹನಕಾರಿ ವಸ್ತು ಪತ್ತೆಯಾಗಿಲ್ಲ ಎಂದು ರೆಂಗಾಖರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ದುರ್ಗೇಶ್ ರಾವ್ಟೆ ತಿಳಿಸಿದ್ದಾರೆ.
ಮ್ಯೂಸಿಕ್ ಸಿಸ್ಟಂ ಮಾತ್ರ ಕೋಣೆಯಲ್ಲಿ ಸ್ಫೋಟಗೊಂಡಿದ್ದು, ಸ್ಫೋಟಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ಅವರು ಹೇಳಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…