ಛತ್ತೀಸ್ಗಢ : ಛತ್ತೀಸ್ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಮದುವೆಯ ಉಡುಗೊರೆಯಾಗಿ ಪಡೆದಿದ್ದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಸ್ಫೋಟಗೊಂಡ ಪರಿಣಾಮ ನವವಿವಾಹಿತ ಹಾಗೂ ಆತನ ಹಿರಿಯ ಸಹೋದರ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ಸಿಸ್ಟಮ್ ಇರಿಸಲಾಗಿದ್ದ ಕೋಣೆಯ ಗೋಡೆಗಳು ಹಾಗೂ ಮೇಲ್ಛಾವಣಿ ಕುಸಿದು ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 1 ರಂದು 22 ವರ್ಷದ ಹೇಮೇಂದ್ರ ಮೆರಾವಿ ವಿವಾಹವಾಗಿದ್ದು, ಸೋಮವಾರ ಹೇಮೇಂದ್ರ ಹಾಗೂ ಇತರ ಕುಟುಂಬ ಸದಸ್ಯರು ತಮ್ಮ ಮನೆಯ ಕೋಣೆಯೊಳಗೆ ಮದುವೆಯ ಉಡುಗೊರೆಗಳನ್ನು ಹೊರ ತೆಗೆದಿದ್ದರು.
ಇನ್ನು ನವವಿವಾಹಿತ ಹೇಮೇಂದ್ರ ತನಗೆ ಗಿಫ್ಟ್ ಬಂದಿದ್ದ ಹೋಮ್ ಥಿಯೇಟರ್ ಸಿಸ್ಟಮ್ ವೈಯರ್ ರನ್ನು ಎಲೆಕ್ಟ್ರಿಕ್ ಬೋರ್ಡ್ ಗೆ ಸಿಕ್ಕಿಸಿ ಆನ್ ಮಾಡಿದಾಗ, ಭಾರೀ ಸ್ಫೋಟ ಸಂಭವಿಸಿದ್ದು ಹೇಮೇಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರ ಸಹೋದರ ರಾಜ್ಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ಇತರ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಕೌರಾದದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಚಿಕಿತ್ಸೆ ವೇಳೆ ಮೆರಾವಿ ಅವರ ಸಹೋದರ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿದ ಕೂಡಲೇ ವಿಧಿವಿಜ್ಞಾನ ತಜ್ಞರೊಂದಿಗೆ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. ಕೊಠಡಿಯನ್ನು ಪರಿಶೀಲಿಸಿದಾಗ ಸ್ಫೋಟಕ್ಕೆ ಕಾರಣವಾಗುವ ಯಾವುದೇ ದಹನಕಾರಿ ವಸ್ತು ಪತ್ತೆಯಾಗಿಲ್ಲ ಎಂದು ರೆಂಗಾಖರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ದುರ್ಗೇಶ್ ರಾವ್ಟೆ ತಿಳಿಸಿದ್ದಾರೆ.
ಮ್ಯೂಸಿಕ್ ಸಿಸ್ಟಂ ಮಾತ್ರ ಕೋಣೆಯಲ್ಲಿ ಸ್ಫೋಟಗೊಂಡಿದ್ದು, ಸ್ಫೋಟಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ಅವರು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…