ಮಂಡ್ಯ: ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗಳು ಸಾವನ್ನಪ್ಪಿದ್ದ 20 ದಿನದ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಗಳು ವಿಜಯಲಕ್ಷ್ಮಿ (21) ಹಾಗೂ ತಾಯಿ ಲಕ್ಷ್ಮಿ ಎಂದು ಗುರುತಿಸಲಾಗಿದೆ.
ಕಳೆದ ಕೆಲವು ವರ್ಷಗಳಿಂದ ಮಾರಸಿಂಗನಹಳ್ಳಿಯ ಹರಿಕೃಷ್ಣ ಹಾಗೂ ವಿಜಯಲಕ್ಷ್ಮಿ ಪ್ರೀತಿಸುತ್ತಿದ್ದರು. ಪ್ರೀತಿಸುವ ನೆಪದಲ್ಲಿ ಕಳೆದ ಒಂದೂವರೆ ವರ್ಷದಿಂದ ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿತ್ತು. ಆದರೆ ಇತ್ತೀಚಿಗೆ ಬೇರೆ ಹುಡುಗಿಯರ ಜೊತೆ ಹರಿಕೃಷ್ಣ ಓಡಾಡಲು ಶುರುಮಾಡಿದ್ದ. ಈ ಬಗ್ಗೆ ಪ್ರಶ್ನಿಸಿದ್ದ ಯುವತಿ, ಮದುವೆ ಮಾಡಿಕೊಳ್ಳುವಂತೆ ಪಟ್ಟು ಹಿಡಿದಿದ್ದಳು. ಆಗ ಮದುವೆಗೆ ನಿರಾಕರಿಸಿ ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಸಿದ್ದ.
ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದು ವಿಜಯಲಕ್ಷ್ಮಿ ಕಳೆದ 20 ದಿನಗಳ ಹಿಂದೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಗಳ ಸಾವಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ತಂದೆ ನಂಜುಂಡೇಗೌಡ ಮಂಡ್ಯ ಗ್ರಾಮಾಂತರ ಠಾಣೆಗೆ ತೆರಳಿದ್ದರು. ಈ ವೇಳೆ ದೂರು ಕೊಟ್ಟು ನ್ಯಾಯ ಕೋರಲು ಹೋಗಿದ್ದವರ ಮೇಲೆಯೇ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇತ್ತ ಮಗಳ ಸಾವಿಗೆ ನ್ಯಾಯವೂ ಇಲ್ಲ, ನಮಗೆ ನೆಮ್ಮದಿಯೂ ಇಲ್ಲ ಎಂದು ನೊಂದ ತಾಯಿ ಲಕ್ಷ್ಮಿ ಗುರುವಾರ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತದೇಹವನ್ನು ಸಾಗಿಸಲು ಬಿಡದೇ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ವಿರುದ್ಧ ಘೋಷಣೆ ಕೂಗಿ ಕಿಡಿಕಾರಿದ್ದಾರೆ. ಆರೋಪಿಯನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…