ಹಾಸನ: ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಹಾಸನದ ಆಲೂರು ಪಟ್ಟಣದಲ್ಲಿ ನಡೆದಿದೆ.
ಆಲೂರಿನ ಕಾರಗೋಡು ಗ್ರಾಮದ ಮೋಹಿತ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ ಮೋಹಿತ್ನಿಂದ ಯುವತಿ ದೂರವಾಗಿದ್ದಳು. ಆದರೂ ಪ್ರೇಯಸಿಯನ್ನು ಮದುವೆಯಾಗುವಂತೆ ಯುವಕ ಕಾಡುತ್ತಿದ್ದ ಎಂದು ತಿಳಿದು ಬಂದಿದೆ.
ಯುವಕನ ಕಾಟದಿಂದ ಬೇಸತ್ತಿದ್ದ ಯುವತಿ, ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಳು. ಬಳಿಕ ಎರಡೂ ಕುಟುಂಬದಿಂದ ರಾಜಿ ಸಂಧಾನಕ್ಕೆ ಮುಂದಾಗಿದ್ದರು. ಈ ಸಂಬಂಧ ಎರಡು ಕುಟುಂಬಗಳು ಯಾರ ತಂಟೆಗೂ ಯಾರು ಬರದಂತೆ ಮಾತುಕತೆ ನಡೆಸಿದ್ದರು. ಬಳಿಕ ಗ್ರಾಮಸ್ಥರ ಜೊತೆಗೆ ಬಂದು ನೋಟರಿ (ದಸ್ತಾವೇಜು) ಮಾಡಿಸಲು ಎರಡು ಕುಟುಂಬಸ್ಥರು ಬಂದಿದ್ದರು. ಈ ವೇಳೆ ಪಾನಮತ್ತನಾಗಿ ಬಂದಿದ್ದ ಯುವಕ ಏಕಾಏಕಿ ಯುವತಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ಹಲ್ಲೆಯ ಬಳಿಕ ಆರೋಪಿ ಪರಾರಿಯಾಗಿದ್ದಾನೆ.
ದಾಳಿಯಿಂದ ಯುವತಿಯ ತಲೆ ಹಾಗೂ ಕೈಗಳಿಗೆ ತೀವ್ರ ಗಾಯಗಳಾಗಿವೆ. ಗಾಯಳುವಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…