ಭೋಪಾಲ್: ಮದುವೆಯಾಗು ಎಂದು ಕೇಳಿದ ಯುವತಿಯನ್ನು ಮನಬಂದಂತೆ ಥಳಿಸಿದ ಯುವಕನ ಮನೆಯನ್ನು ಬುಲ್ಡೋಜರ್ನಿಂದ ಧ್ವಂಸಗೊಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
19 ವರ್ಷದ ಯುವತಿಯನ್ನು ಆರೋಪಿ ಯುವಕ ಪಂಕಜ್ ತ್ರಿಪಾಠಿ (24) ಅಮಾನುಷವಾಗಿ ಥಳಿಸಿದ್ದ. ಇದರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಶನಿವಾರ ತ್ರಿಪಾಠಿಯನ್ನು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬಂಧಿಸಲಾಗಿದೆ. ಇಂದು ಆರೋಪಿಯ ಮನೆಯನ್ನು ಕೆಡವಲು ಜಿಲ್ಲಾಡಳಿತ ಬುಲ್ಡೋಜರ್ ಅನ್ನು ಕಳುಹಿಸಿದೆ. ಪೊಲೀಸರ ಬೆಂಬಲದೊಂದಿಗೆ ಬುಲ್ಡೋಜರ್ ಮನೆಯನ್ನು ಸಂಪೂರ್ಣವಾಗಿ ನೆಲಸಮಗೊಳಿಸಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವೀಡಿಯೋದಲ್ಲಿ ತ್ರಿಪಾಠಿ ಯುವತಿಗೆ ಮೊದಲು ಕಪಾಳಮೋಕ್ಷ ಮಾಡಿರುವುದು ಕಂಡುಬಂದಿದೆ. ಬಳಿಕ ಆಕೆಯ ತಲೆಕೂದಲನ್ನು ಹಿಡಿದು ನೆಲಕ್ಕೆ ಬಡಿದಿದ್ದಾನೆ. ನಂತರ ಆಕೆಯ ಮುಖ ಹಾಗೂ ದೇಹದ ಇತರ ಭಾಗಗಳಿಗೆ ಕಾಲಿನಿಂದ ನಿರ್ದಾಕ್ಷಿಣ್ಯವಾಗಿ ಒದ್ದಿದ್ದಾನೆ. ಈ ವೇಳೆ ಯುವತಿ ಪ್ರಜ್ಞಾಹೀನಳಾಗಿದ್ದಾಳೆ.
ಈ ಎಲ್ಲಾ ಕೃತ್ಯವನ್ನು ತ್ರಿಪಾಠಿಯ ಸ್ನೇಹಿತ ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾನೆ. ವೀಡಿಯೋವನ್ನು ಅಳಿಸುವಂತೆ ತ್ರಿಪಾಠಿ ಕೇಳಿದ್ದು, ಈ ವೇಳೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದಲ್ಲಿ ಬಿದ್ದಿದ್ದ ಯುವತಿಯನ್ನು ಮೇಲೆತ್ತಲು ಪ್ರಯತ್ನಿಸಿದ್ದಾನೆ.
ಯುವತಿ ಬಳಿಕ ಗಂಟೆಗಟ್ಟಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ರೇವಾ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಯುವತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೌಗಂಜ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ, ಆರೋಪಿ ಪಂಕಜ್ ತ್ರಿಪಾಠಿಯನ್ನು ಬಂಧಿಸಲಾಗಿದೆ. ಬೇಕಂತಲೇ ವಿಡಿಯೋ ಚಿತ್ರೀಕರಿಸಿದ ಆತನ ಸ್ನೇಹಿನನ್ನೂ ಅರೆಸ್ಟ್ ಮಾಡಲಾಗಿದೆ. ಆರೋಪಿ ಪಂಕಜ್ ತ್ರಿಪಾಠಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 ಹಾಗೂ ವಿಡಿಯೋ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…