Featured

ಮದುವೆಗೆ ನಿರಾಕರಿಸಿದ ಯುವತಿಯನ್ನು ಮನಬಂದಂತೆ ಥಳಿಸಿದ ಯುವಕನ ಮನೆ ಬುಲ್ಡೋಜರ್‌ನಿಂದ ಧ್ವಂಸ – Vishwanews24

ಮದುವೆಗೆ ನಿರಾಕರಿಸಿದ ಯುವತಿಯನ್ನು ಮನಬಂದಂತೆ ಥಳಿಸಿದ ಯುವಕನ ಮನೆ ಬುಲ್ಡೋಜರ್‌ನಿಂದ ಸಂಪೂರ್ಣ ನೆಲಸಮ

ಭೋಪಾಲ್: ಮದುವೆಯಾಗು ಎಂದು ಕೇಳಿದ ಯುವತಿಯನ್ನು ಮನಬಂದಂತೆ ಥಳಿಸಿದ ಯುವಕನ  ಮನೆಯನ್ನು ಬುಲ್ಡೋಜರ್‌ನಿಂದ ಧ್ವಂಸಗೊಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

19 ವರ್ಷದ ಯುವತಿಯನ್ನು ಆರೋಪಿ ಯುವಕ ಪಂಕಜ್ ತ್ರಿಪಾಠಿ (24) ಅಮಾನುಷವಾಗಿ ಥಳಿಸಿದ್ದ. ಇದರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಶನಿವಾರ ತ್ರಿಪಾಠಿಯನ್ನು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬಂಧಿಸಲಾಗಿದೆ. ಇಂದು ಆರೋಪಿಯ ಮನೆಯನ್ನು ಕೆಡವಲು ಜಿಲ್ಲಾಡಳಿತ ಬುಲ್ಡೋಜರ್ ಅನ್ನು ಕಳುಹಿಸಿದೆ. ಪೊಲೀಸರ ಬೆಂಬಲದೊಂದಿಗೆ ಬುಲ್ಡೋಜರ್ ಮನೆಯನ್ನು ಸಂಪೂರ್ಣವಾಗಿ ನೆಲಸಮಗೊಳಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವೀಡಿಯೋದಲ್ಲಿ ತ್ರಿಪಾಠಿ ಯುವತಿಗೆ ಮೊದಲು ಕಪಾಳಮೋಕ್ಷ ಮಾಡಿರುವುದು ಕಂಡುಬಂದಿದೆ. ಬಳಿಕ ಆಕೆಯ ತಲೆಕೂದಲನ್ನು ಹಿಡಿದು ನೆಲಕ್ಕೆ ಬಡಿದಿದ್ದಾನೆ. ನಂತರ ಆಕೆಯ ಮುಖ ಹಾಗೂ ದೇಹದ ಇತರ ಭಾಗಗಳಿಗೆ ಕಾಲಿನಿಂದ ನಿರ್ದಾಕ್ಷಿಣ್ಯವಾಗಿ ಒದ್ದಿದ್ದಾನೆ. ಈ ವೇಳೆ ಯುವತಿ ಪ್ರಜ್ಞಾಹೀನಳಾಗಿದ್ದಾಳೆ.

ಈ ಎಲ್ಲಾ ಕೃತ್ಯವನ್ನು ತ್ರಿಪಾಠಿಯ ಸ್ನೇಹಿತ ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾನೆ. ವೀಡಿಯೋವನ್ನು ಅಳಿಸುವಂತೆ ತ್ರಿಪಾಠಿ ಕೇಳಿದ್ದು, ಈ ವೇಳೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದಲ್ಲಿ ಬಿದ್ದಿದ್ದ ಯುವತಿಯನ್ನು ಮೇಲೆತ್ತಲು ಪ್ರಯತ್ನಿಸಿದ್ದಾನೆ.

ಯುವತಿ ಬಳಿಕ ಗಂಟೆಗಟ್ಟಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ರೇವಾ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಯುವತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೌಗಂಜ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ, ಆರೋಪಿ ಪಂಕಜ್ ತ್ರಿಪಾಠಿಯನ್ನು ಬಂಧಿಸಲಾಗಿದೆ. ಬೇಕಂತಲೇ ವಿಡಿಯೋ ಚಿತ್ರೀಕರಿಸಿದ ಆತನ ಸ್ನೇಹಿನನ್ನೂ ಅರೆಸ್ಟ್ ಮಾಡಲಾಗಿದೆ. ಆರೋಪಿ ಪಂಕಜ್ ತ್ರಿಪಾಠಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 ಹಾಗೂ ವಿಡಿಯೋ ಚಿತ್ರೀಕರಿಸಿ ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ ವ್ಯಕ್ತಿಯ ವಿರುದ್ಧ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

3 hours ago