Featured

ಮಂಗಳೂರು : ಮದುವೆಯಲ್ಲಿ ಭಾಗವಹಿಸಲು ಅನುಮತಿ ಪತ್ರಕ್ಕಾಗಿ ನನ್ನ ಕಚೇರಿ ಸಂಪರ್ಕಿಸಿ : ಶಾಸಕ ಕಾಮತ್ -Vishwanews24

ಮದುವೆಯಲ್ಲಿ ಭಾಗವಹಿಸಲು ಅನುಮತಿ ನೀಡುವ ನಿಟ್ಟಿನಲ್ಲಿ ನನ್ನ ಕಚೇರಿ ಕಾರ್ಯಾಚರಿಸಲಿದೆ : ಶಾಸಕ ಕಾಮತ್ -Vishwanews24

ಮಂಗಳೂರು : ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಾರಾಂತ್ಯದಲ್ಲಿ ಹೇರಿರುವ ಲಾಕ್ ಡೌನ್ ಹಾಗೂ ಇನ್ನಿತರ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೂರ್ವ ನಿಗದಿತ ಮದುವೆ ಕಾರ್ಯಕ್ರಮದಲ್ಲಿ 50 ಜನರಿಗೆ ಭಾಗವಹಿಸಲು ಅನುಮತಿ ನೀಡಲಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೂರ್ವ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳಿಗೆ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಮದುವೆ ಕಾರ್ಯಕ್ರಮದಲ್ಲಿ ವಧು ವರರ ಕಡೆಯವರನ್ನು ಹಾಗೂ ಫೋಟೋಗ್ರಾಫರ್, ಬ್ಯೂಟಿಷನ್, ಅರ್ಚಕರು ಸೇರಿದಂತೆ 50 ಜನರಿಗೆ ಭಾಗವಹಿಸಬಹುದು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್ -Vishwanews24

ಇದಕ್ಕಾಗಿ ಕಾರ್ಯಕ್ರಮದ ಆಯೋಜಕರು ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ನನ್ನ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಬಂದರೆ ಅನುಮತಿ ನೀಡುವ‌ ನಿಟ್ಟಿನಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿ ಅನುಮತಿ ಒದಗಿಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಸಭಾಂಗಣಗಳಲ್ಲಿ ಕೋವಿಡ್ ನಿಯಂತ್ರಣ ಮಾರ್ಗ ಸೂಚಿಗಳನ್ನು ಪಾಲಿಸಿಕೊಂಡು ಮದುವೆ ಕಾರ್ಯಕ್ರಮ ನಡೆಸಬಹುದು. ಅದಕ್ಕಾಗಿ ಆಯೋಜಕರು ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗೆ ಮನವಿ ಪತ್ರ, ಭಾಗವಹಿಸುವ 50 ಜನರ ಹೆಸರು, ದೂರವಾಣಿ ಸಂಖ್ಯೆ ಹಾಗೂ ಮದುವೆ ಆಮಂತ್ರಣ ಪತ್ರಿಕೆಯೊಂದಿಗೆ ನನ್ನ ಕಚೇರಿಗೆ ತಲುಪಿಸಿದರೆ ಅನುಮತಿ ನೀಡುವ ನಿಟ್ಟಿನಲ್ಲಿ ನನ್ನ ಕಚೇರಿ ಕಾರ್ಯಾಚರಿಸಲಿದೆ ಎಂದರು.

ಅನುಮತಿ ಪತ್ರ ದೊರೆತವರು ಸಮಾರಂಭಗಳಿಗೆ ತೆರಳುವ ಸಂದರ್ಭದಲ್ಲಿ ತಮ್ಮ ಹೆಸರು ಇರುವ ಅನುಮತಿ ಪತ್ರ, ಆಧಾರ್ ಕಾರ್ಡ್ ಹಾಗೂ ಮದುವೆ ಆಮಂತ್ರಣ ಪತ್ರಿಕೆಯ ಪ್ರತಿ ತೋರಿಸಬಹುದು.ಅಥವ ತಮ್ಮ ಮೊಬೈಲ್ ನಲ್ಲಿ ತೋರಿಸಿದರೂ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಉಡುಪಿ : ಮದುವೆ ಸಮಾರಂಭಕ್ಕೆ ಆಗಮಿಸುವವರಿಗೆ ಪಾಸ್ ಕಡ್ಡಾಯ ; 50 ಜನರ ಪಟ್ಟಿ ನೀಡಲು ಆದೇಶ -Vishwanews24

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

21 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago