ಮಂಗಳೂರು: ಮದುವೆಯನ್ನು ಅಪರೂಪ ಎನ್ನುವಂತೆ ಮಾಡಿಕೊಳ್ಳುವುದು ಕೆಲವರಿಗೆ ಇಷ್ಟ. ಹಾಗೆಯೇ ನೀರಿನಲ್ಲಿ, ವಿಮಾನದಲ್ಲಿ, ಮತ್ತು ರೋಪ್ ವೇನಲ್ಲಿ ಮದುವೆಯಾಗೋದನ್ನು ಕೇಳಿದ್ದೇವೆ. ಅದೇ ರೀತಿ ಮದುವೆ ನಂತರ ಕಾರಿನಲ್ಲಿ, ಕುದುರೆ ಮೇಲೆ ದಿಬ್ಬಣ ಹೋಗುತ್ತಾರೆ. ಆದರೆ ಇಲ್ಲೊಬ್ಬ ವರ ಜೆಸಿಬಿಯಲ್ಲೇ ದಿಬ್ಬಣ ಹೊರಟಿದ್ದಾರೆ.
ಜೆಸಿಬಿ ಆಪರೇಟರ್ ತನ್ನ ಮದುವೆಯ ದಿಬ್ಬಣವನ್ನು ಜೆಸಿಬಿಯಲ್ಲಿ ಮೆರವಣಿಗೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಟ್ಯಾರ್ ಎಂಬಲ್ಲಿ ಈ ಪ್ರಸಂಗ ನಡೆದಿದ್ದು, ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 2 ಕಿಮೀ ಉದ್ದಕ್ಕೂ ಜೆಸಿಬಿ ಮುಂದೆ ಕುಳಿತುಕೊಂಡು ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ.
ಚೇತನ್ ಮತ್ತು ಮಮತಾ ದಂಪತಿಯ ಮದುವೆ ಸೋಮವಾರ ನಡೆದಿದ್ದು, ಮದುವೆ ಬಳಿಕ ಮೆರವಣಿಗೆ ಜೆಸಿಬಿ ಮತ್ತು ವಾಲಗದ ಜೊತೆಗೆ ನಡೆದಿದೆ. ಚೇತನ್ ಹಲವು ವರ್ಷಗಳಿಂದ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದು, ಸ್ಥಳೀಯವಾಗಿ ಹೆಸರು ಮಾಡಿದ್ದರು. ಆದ್ದರಿಂದ ತಮ್ಮ ಮದುವೆಯಲ್ಲೂ ಕೆಲಸದ ಪ್ರೀತಿ ಮೆರೆದಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…