ಮಂಗಳೂರು: ಮದುವೆಯನ್ನು ಅಪರೂಪ ಎನ್ನುವಂತೆ ಮಾಡಿಕೊಳ್ಳುವುದು ಕೆಲವರಿಗೆ ಇಷ್ಟ. ಹಾಗೆಯೇ ನೀರಿನಲ್ಲಿ, ವಿಮಾನದಲ್ಲಿ, ಮತ್ತು ರೋಪ್ ವೇನಲ್ಲಿ ಮದುವೆಯಾಗೋದನ್ನು ಕೇಳಿದ್ದೇವೆ. ಅದೇ ರೀತಿ ಮದುವೆ ನಂತರ ಕಾರಿನಲ್ಲಿ, ಕುದುರೆ ಮೇಲೆ ದಿಬ್ಬಣ ಹೋಗುತ್ತಾರೆ. ಆದರೆ ಇಲ್ಲೊಬ್ಬ ವರ ಜೆಸಿಬಿಯಲ್ಲೇ ದಿಬ್ಬಣ ಹೊರಟಿದ್ದಾರೆ.
ಜೆಸಿಬಿ ಆಪರೇಟರ್ ತನ್ನ ಮದುವೆಯ ದಿಬ್ಬಣವನ್ನು ಜೆಸಿಬಿಯಲ್ಲಿ ಮೆರವಣಿಗೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಟ್ಯಾರ್ ಎಂಬಲ್ಲಿ ಈ ಪ್ರಸಂಗ ನಡೆದಿದ್ದು, ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 2 ಕಿಮೀ ಉದ್ದಕ್ಕೂ ಜೆಸಿಬಿ ಮುಂದೆ ಕುಳಿತುಕೊಂಡು ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ.
ಚೇತನ್ ಮತ್ತು ಮಮತಾ ದಂಪತಿಯ ಮದುವೆ ಸೋಮವಾರ ನಡೆದಿದ್ದು, ಮದುವೆ ಬಳಿಕ ಮೆರವಣಿಗೆ ಜೆಸಿಬಿ ಮತ್ತು ವಾಲಗದ ಜೊತೆಗೆ ನಡೆದಿದೆ. ಚೇತನ್ ಹಲವು ವರ್ಷಗಳಿಂದ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದು, ಸ್ಥಳೀಯವಾಗಿ ಹೆಸರು ಮಾಡಿದ್ದರು. ಆದ್ದರಿಂದ ತಮ್ಮ ಮದುವೆಯಲ್ಲೂ ಕೆಲಸದ ಪ್ರೀತಿ ಮೆರೆದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…