ಮಂಗಳೂರು: ಮದುವೆಯನ್ನು ಅಪರೂಪ ಎನ್ನುವಂತೆ ಮಾಡಿಕೊಳ್ಳುವುದು ಕೆಲವರಿಗೆ ಇಷ್ಟ. ಹಾಗೆಯೇ ನೀರಿನಲ್ಲಿ, ವಿಮಾನದಲ್ಲಿ, ಮತ್ತು ರೋಪ್ ವೇನಲ್ಲಿ ಮದುವೆಯಾಗೋದನ್ನು ಕೇಳಿದ್ದೇವೆ. ಅದೇ ರೀತಿ ಮದುವೆ ನಂತರ ಕಾರಿನಲ್ಲಿ, ಕುದುರೆ ಮೇಲೆ ದಿಬ್ಬಣ ಹೋಗುತ್ತಾರೆ. ಆದರೆ ಇಲ್ಲೊಬ್ಬ ವರ ಜೆಸಿಬಿಯಲ್ಲೇ ದಿಬ್ಬಣ ಹೊರಟಿದ್ದಾರೆ.
ಜೆಸಿಬಿ ಆಪರೇಟರ್ ತನ್ನ ಮದುವೆಯ ದಿಬ್ಬಣವನ್ನು ಜೆಸಿಬಿಯಲ್ಲಿ ಮೆರವಣಿಗೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಟ್ಯಾರ್ ಎಂಬಲ್ಲಿ ಈ ಪ್ರಸಂಗ ನಡೆದಿದ್ದು, ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 2 ಕಿಮೀ ಉದ್ದಕ್ಕೂ ಜೆಸಿಬಿ ಮುಂದೆ ಕುಳಿತುಕೊಂಡು ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ.
ಚೇತನ್ ಮತ್ತು ಮಮತಾ ದಂಪತಿಯ ಮದುವೆ ಸೋಮವಾರ ನಡೆದಿದ್ದು, ಮದುವೆ ಬಳಿಕ ಮೆರವಣಿಗೆ ಜೆಸಿಬಿ ಮತ್ತು ವಾಲಗದ ಜೊತೆಗೆ ನಡೆದಿದೆ. ಚೇತನ್ ಹಲವು ವರ್ಷಗಳಿಂದ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದು, ಸ್ಥಳೀಯವಾಗಿ ಹೆಸರು ಮಾಡಿದ್ದರು. ಆದ್ದರಿಂದ ತಮ್ಮ ಮದುವೆಯಲ್ಲೂ ಕೆಲಸದ ಪ್ರೀತಿ ಮೆರೆದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…