Featured

ಮದುವೆಯಾಗಲು ಜಾತಿ ಬೇರೆ ಎಂದು ನಿರಾಕರಿಸಿದ ಪ್ರಿಯತಮ – ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ – Vishwanews24

ಮದುವೆಯಾಗಲು ಜಾತಿ ಬೇರೆ ಎಂದು ನಿರಾಕರಿಸಿದ ಪ್ರಿಯತಮ

ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ

ಬಳ್ಳಾರಿ: ಮದುವೆಯ ವಿಚಾರಕ್ಕೆ ಜಾತಿ ಅಡ್ಡಬಂದಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೊಬ್ಬಳು ಇದೀಗ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾಳೆ.

ಮೃತಳನ್ನು ಅಮೃತಾ ಎಂದು ಗುರುತಿಸಲಾಗಿದೆ. ಈಕೆ ನಾಲ್ಕು ದಿನಗಳ ಕಾಲ ಬಳ್ಳಾರಿಯ‌ ವಿಮ್ಸ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ಮಾಡಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಘಟನೆ ಏನು..?: ಮೃತ ಅಮೃತಾ ಪಿಯುಸಿ ಮುಗಿದ ಬಳಿಕ ಸ್ನೇಹಿತೆಯ ಗಂಡನ ಸಹೋದರ ಸುನೀಲ್ ಪರಿಚಯವಾಗಿತ್ತು. ಪರಿಚಯವು ಪ್ರೀತಿಗೆ ತಿರುಗಿದೆ. ಪ್ರೇಮ ಪ್ರಣಯ ಹೀಗೆ ಎಲ್ಲಾ ರೀತಿಯಲ್ಲಿ ಬಳಸಿಕೊಂಡ ಬಳಿಕ ಮದುವೆಯಾಗಲು ನಿನ್ನ ಜಾತಿ ಬೇರೆ ಎಂದು ಸುನೀಲ್ ನಿರಾಕರಿಸಿದ್ದ. ಮದುವೆ ನಿರಾಕರಿಸಿದ ಹಿನ್ನೆಲೆಯಲ್ಲಿ ಅಮೃತಾ ನೇಣಿಗೆ ಶರಣಾಗಿದ್ದಳು.

ಕೊನೆಯ ಕ್ಷಣದಲ್ಲಿ ನೇಣಿನಿಂದ ಇಳಿಸಿ ಬದುಕಿಸಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಅಂತೆಯೇ ಕೂಡಲೇ ಆಕೆಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಇ ಚಿಕಿತ್ಸೆ ನೀಡಲಾಗುತ್ತಿತ್ತು. 4 ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದ ಅಮೃತಾ ಇದೀಗ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾಳೆ.

ಮದುವೆ ನಿಕಾರಣೆ ಯಾಕೆ..?: ಅಮೃತ (ವಡ್ಡರ) ತಳ ಸಮುದಾಯಕ್ಕೆ ಸೇರಿದ ಯುವತಿಯೆಂದು ಸುನೀಲ್ (ಬಲಿಜ) ಮೇಲ್ಜಾತಿಗೆ ಸೇರಿದ್ದವರೆಂದು ಮದುವೆ ಬೇಡ ಎಂದಿರುವ ಆರೋಪ ಕೇಳಿಬಂದಿದೆ.

ಡೆತ್‍ನೋಟ್‌ನಲ್ಲಿ ಏನಿದೆ?: ಆತ್ಮಹತ್ಯೆಗೂ ಮುನ್ನ ತನಗೆ ಕೈ ಕೊಟ್ಟ ಪ್ರೇಮಿಯ ಮೋಸದ ಕತೆಯನ್ನು ಅಮೃತಾ ಪತ್ರದ ಮೂಲಕ ಬರೆದಿಟ್ಟಿದ್ದಳು. ಮದುವೆ ನಿರಾಕರಿಸಿದ ಯುವಕ ಸುನಿಲ್ ಮಾಡಿದ ಅತ್ಯಾಚಾರ ಮತ್ತು ಅವರ ಕುಟುಂಬದವರು ಮಾಡಿದ ನಿಂದನೆ ಬಗ್ಗೆಯೂ ಅಮೃತಾ ಪತ್ರದಲ್ಲಿ ತಿಳಿಸಿದ್ದಾಳೆ.

ಸದ್ಯ ಪ್ರಕರಣ ಸಂಬಂಧ ಆರೋಪಿ ಸುನೀಲ್ ನನ್ನ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago