ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕ ಸಾವಿಗೆ ಶರಣು – Vishwanews24
ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕ ಸಾವಿಗೆ ಶರಣು
ಯಲ್ಲಾಪುರ : ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕನೋರ್ವ ಸಾವಿಗೆ ಶರಣಾಗಿರುವ ಘಟನೆ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ.
ತೇಲಂಗಾರದ ಕಿರಗಾರಿಮನೆಯ ನಿವಾಸಿ ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. . ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹವ್ಯಕ ಸಮುದಾಯದ ಯುವಕರಿಗೆ ಮದುವೆಗೆ ಕನ್ಯೆ ಸಿಗುವುದು ಇತ್ತೀಚೆಗೆ ಕಷ್ಟವಾಗಿದೆ.ನಾಗರಾಜ ಗಾಂವ್ಕರ್, ಕೃಷಿ ಕೆಲಸ ಮಾಡಿಕೊಂಡಿದ್ದು, ಮದುವೆಯಾಗಲು ಕನ್ಯೆ ಸಿಗುದಿಲ್ಲ ಅಂತ ಮನನೊಂದಿದ್ದ. ಈ ಹಿನ್ನೆಲೆಯಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡು ತನ್ನ ಬದುಕನ್ನೇ ಅಂತ್ಯಗೊಳಿಸಿದ್ದಾನೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದ.ಕ, ಉಡುಪಿಯಲ್ಲಿ 10 ದಿನ ಭಾರೀ ಮಳೆ ಸಾಧ್ಯತೆ – ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ – Vishwanews24
