ಉಡುಪಿ : ಮದುವೆಯಾಗುವುದಾಗಿ ಹಲವಾರು ಯುವಕರನ್ನು ನಂಬಿಸಿ ಅವರಿಂದಲೇ ಹಣ ಪಡೆದು ವಂಚಿಸಿರುವ ಮಹಿಳೆಯನ್ನು ಹೊಸಕೋಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಬಂಧಿತ ಮಹಿಳೆಯಾಗಿದ್ದು, ಹೊಸಕೋಟೆ ತಾಲೂಕಿನಲ್ಲಿ ಯುವಕರನ್ನು ವಂಚಿಸಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ತಬಸ್ಸುಮ್ ಮೇಲೆ ಹೊಸಕೋಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಮಹಿಳೆಯ ಜಾಡು ಹಿಡಿದು ಉಡುಪಿಗೆ ಆಗಮಿಸಿ ವಶಕ್ಕೆ ಪಡೆದಿದ್ದು, ತಬಸ್ಸುಮ್ ಮೇಲೆ ಮದುವೆಯಾಗುವುದಾಗಿ ನಂಬಿಸಿ ಯುವಕರಿಂದ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಈಕೆಯನ್ನು ಪೊಲೀಸರು ಬಂಧಿಸಲಾಗಿದೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…