Featured

ಮದುವೆಯಾಗುವುದಾಗಿ ಯುವಕರನ್ನ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ :ಉಡುಪಿಯಲ್ಲಿ ಮಹಿಳೆಯ ಬಂಧನ..Vishwanews24

ಮದುವೆಯಾಗುವುದಾಗಿ ಯುವಕರನ್ನ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ : ಉಡುಪಿಯಲ್ಲಿ ಮಹಿಳೆಯ ಬಂಧನ..

ಉಡುಪಿ : ಮದುವೆಯಾಗುವುದಾಗಿ ಹಲವಾರು ಯುವಕರನ್ನು ನಂಬಿಸಿ ಅವರಿಂದಲೇ ಹಣ ಪಡೆದು ವಂಚಿಸಿರುವ ಮಹಿಳೆಯನ್ನು ಹೊಸಕೋಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಬಂಧಿತ ಮಹಿಳೆಯಾಗಿದ್ದು, ಹೊಸಕೋಟೆ ತಾಲೂಕಿನಲ್ಲಿ ಯುವಕರನ್ನು ವಂಚಿಸಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ತಬಸ್ಸುಮ್ ಮೇಲೆ ಹೊಸಕೋಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಮಹಿಳೆಯ ಜಾಡು ಹಿಡಿದು ಉಡುಪಿಗೆ ಆಗಮಿಸಿ ವಶಕ್ಕೆ ಪಡೆದಿದ್ದು, ತಬಸ್ಸುಮ್ ಮೇಲೆ ಮದುವೆಯಾಗುವುದಾಗಿ ನಂಬಿಸಿ ಯುವಕರಿಂದ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಈಕೆಯನ್ನು ಪೊಲೀಸರು ಬಂಧಿಸಲಾಗಿದೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

56 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

24 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

24 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago