Featured

ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಮತ್ತೊಬ್ಬನ ಜೊತೆ ಪರಾರಿ : ಮನನೊಂದು ಪತಿ ನೇಣಿಗೆ ಶರಣು – vishwanews24

ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಮತ್ತೊಬ್ಬನ ಜೊತೆ ಪರಾರಿ : ಮನನೊಂದು ಪತಿ ನೇಣಿಗೆ ಶರಣು

ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ.

ನೇಣಿಗೆ ಶರಣಾದ ವ್ಯಕ್ತಿಯನ್ನು ಹರೀಶ್ (32) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಹರೀಶ್ ಡೆತ್‍ನೋಟ್ ಬರೆದಿಟ್ಟಿದ್ದಾನೆ. ಡೆತ್‍ನೋಟ್‍ನಲ್ಲಿ ತನ್ನ ಹೆಂಡತಿ ಬೇರೊಬ್ಬನ ಜೊತೆ ಪರಾರಿಯಾಗಿರುವುದನ್ನು ಉಲ್ಲೇಖಿಸಿದ್ದಾನೆ. ಅಲ್ಲದೇ ತನ್ನ ಸಾವಿಗೆ ಹೆಂಡತಿ, ಅತ್ತೆ, ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಆರೋಪಿಸಿದ್ದಾನೆ.

ಪತ್ನಿ ಹರೀಶ್ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದಳು. ಅಲ್ಲದೇ ಪ್ರಾಣ ಬೆದರಿಕೆ ಹಾಕಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ತನ್ನ ಅಂತ್ಯ ಸಂಸ್ಕಾರವನ್ನ ಬಸವ ಧರ್ಮ ಪ್ರಕಾರವಾಗಿ ನೆರವೇರಿಸುವಂತೆ ಡೆತ್‍ನೋಟ್‍ನಲ್ಲಿ ಆತ ಬರೆದಿಟ್ಟಿದ್ದಾನೆ. ಬಳಿಕ ಜಮೀನಿಗೆ ಹೋಗಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರೀಶ್ ಸಾವಿನಿಂದ ಮನನೊಂದು, ಮುಂದೆ ನಿಂತು ಮದುವೆ ಮಾಡಿಸಿದ್ದ ಮಹಿಳೆಯ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago