ನವದೆಹಲಿ:ಮದುವೆಯ ನೆಪದಲ್ಲಿ ಯುವ ಹಿಂದೂ ಯುವಕ ಮತ್ತು ಯುವತಿಯರನ್ನು ಮತಾಂತರ ಮಾಡುವುದು ತಪ್ಪು ಎಂದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಯುವಕ, ಯುವತಿಯರಲ್ಲಿ ತಮ್ಮ ಧರ್ಮ ಮತ್ತು ಸಂಪ್ರದಾಯಗಳ ಬಗ್ಗೆ ಹೆಮ್ಮೆ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಉತ್ತರಾಖಂಡ್ನಲ್ಲಿ ನಡೆದ ಆರ್ಎಸ್ಎಸ್ ಕಾರ್ಯಕರ್ತರ ಹಾಗೂ ಕುಟುಂಬ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಮ್ಮ ಮಕ್ಕಳನ್ನು ನಾವು ಪೋಷಿಸುವುದರ ಜೊತೆಗೆ ಮನೆಯಲ್ಲೇ ಅವರಿಗೆ ನಾವು ಧರ್ಮದ ಕುರಿತು ತಿಳಿಸಿಕೊಡುವ ಅವಶ್ಯಕತೆ ಇದೆ. ನಮ್ಮ ಧರ್ಮದ ಬಗ್ಗೆ ಸೇರಿದಂತೆ ನಮ್ಮ ಬಗ್ಗೆ, ನಮ್ಮ ಸಂಪ್ರದಾಯ ಹಾಗೂ ಪೂಜೆಗಳನ್ನು ಗೌರವಿಸುವ ಬಗ್ಗೆ ಹೇಳಿಕೊಡಬೇಕಾಗಿದೆ” ಎಂದಿದ್ದಾರೆ.
“ಹೇಗೆ ಮತಾಂತರ ನಡೆಯುತ್ತಿದೆ. ಹಿಂದು ಯುವಕ, ಯುವತಿಯರು ಇತರ ಧರ್ಮಗಳನ್ನು ವಿವಾಹದಂತಹ ಸಣ್ಣ ಸ್ವಾರ್ಥಕ್ಕಾಗಿ ಹೇಗೆ ಮತಾಂತರವಾಗುತ್ತಿದ್ದಾರೆ? ಈ ರೀತಿಯ ಕೆಲಸವನ್ನು ಯಾರು ಮಾಡುತ್ತಿದ್ದಾರೋ ಅದು ಸರಿಯಲ್ಲ. ಆದರೆ, ಅದು ಬೇರೆ ವಿಚಾರವಾಗಿದೆ” ಎಂದು ಹೇಳಿದ್ದಾರೆ.
“ಮತಾಂತರದ ಪ್ರಶ್ನೆ ಒಂದು ವೇಳೆ ಎದುರಾದಲ್ಲಿ ಅದಕ್ಕೆ ತಕ್ಕ ಉತ್ತರ ನೀಡಬೇಕು. ನಮ್ಮಲ್ಲಿ ಆ ಕುರಿತು ಗೊಂದಲ ಇರಬಾರದು. ಆ ರೀತಿಯಾಗಿ ನಾವು ನಮ್ಮ ಮಕ್ಕಳನ್ನು ಬೆಳೆಸುವುದು ಅವಶ್ಯಕ” ಎಂದು ತಿಳಿಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…