ಚಾಮರಾಜನಗರ : ಮದುವೆ ಆರತಕ್ಷತೆಯ ಪೋಟೋ ತೆಗೆಯುತ್ತಿರುವಾಗಲೇ ಪೋಟೋಗ್ರಾಫರ್ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತ ದುರ್ದೈವಿ. ಮದುವೆ ಮಂಟಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಮೂರ್ತಿ ಕುಸಿದು ಬಿದ್ದಿದ್ದು, ಕೊನೆಯುಸಿರೆಳೆದಿದ್ದಾರೆ.
ಮದುವೆ ಶಾಸ್ತ್ರಗಳು ನಡೆಯುತ್ತಿದ್ದ ವೇಳೆ ಪರಶಿವಮೂರ್ತಿ ಅವರು ಅತ್ಯಂತ ಉತ್ಸಾಹದಿಂದ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದರು. ಆದರೆ, ಇದ್ದಕ್ಕಿದ್ದಂತೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೂಡಲೇ ಅವರು ಕಲ್ಯಾಣ ಮಂಟಪದ ವೇದಿಕೆಯ ಮುಂದೆಯೇ ಕುಸಿದು ಬಿದ್ದಿದ್ದಾರೆ. ಇದನ್ನು ಕಂಡ ಮದುವೆಗೆ ಬಂದಿದ್ದ ಅತಿಥಿಗಳು ಹಾಗೂ ವಧು-ವರನ ಕಡೆಯವರು ತಕ್ಷಣ ಓಡಿ ಬಂದು ಅವರಿಗೆ ಪ್ರಥಮ ಚಿಕಿತ್ಸೆ ನೀಡಲು ಪ್ರಯತ್ನಿಸಿದರು.
ಪರಶಿವಮೂರ್ತಿ ಅವರ ಸ್ಥಿತಿ ಗಂಭೀರವಾಗುತ್ತಿರುವುದನ್ನು ಕಂಡು ಮದುವೆ ಮನೆಯವರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲು ಮುಂದಾದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಆಸ್ಪತ್ರೆಗೆ ತಲುಪುವ ಮೊದಲೇ ಪರಶಿವಮೂರ್ತಿ ಅವರು ದಾರಿಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವೈದ್ಯರ ಪ್ರಕಾರ, ತೀವ್ರ ಹೃದಯಾಘಾತ ಸಂಭವಿಸಿರುವುದರಿಂದ ಅವರು ಸಾವನ್ನಪ್ಪಿದ್ದಾರೆ.
ನಗುನಗುತ್ತಾ ಎಲ್ಲರ ಫೋಟೋ ತೆಗೆಯುತ್ತಿದ್ದ ವ್ಯಕ್ತಿ ಕಣ್ಣೆದುರೇ ಮೃತಪಟ್ಟಿರುವುದು ಮದುವೆ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿತ್ತು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…