ಚಾಮರಾಜನಗರ : ಮದುವೆ ಆರತಕ್ಷತೆಯ ಪೋಟೋ ತೆಗೆಯುತ್ತಿರುವಾಗಲೇ ಪೋಟೋಗ್ರಾಫರ್ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತ ದುರ್ದೈವಿ. ಮದುವೆ ಮಂಟಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಮೂರ್ತಿ ಕುಸಿದು ಬಿದ್ದಿದ್ದು, ಕೊನೆಯುಸಿರೆಳೆದಿದ್ದಾರೆ.
ಮದುವೆ ಶಾಸ್ತ್ರಗಳು ನಡೆಯುತ್ತಿದ್ದ ವೇಳೆ ಪರಶಿವಮೂರ್ತಿ ಅವರು ಅತ್ಯಂತ ಉತ್ಸಾಹದಿಂದ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದರು. ಆದರೆ, ಇದ್ದಕ್ಕಿದ್ದಂತೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೂಡಲೇ ಅವರು ಕಲ್ಯಾಣ ಮಂಟಪದ ವೇದಿಕೆಯ ಮುಂದೆಯೇ ಕುಸಿದು ಬಿದ್ದಿದ್ದಾರೆ. ಇದನ್ನು ಕಂಡ ಮದುವೆಗೆ ಬಂದಿದ್ದ ಅತಿಥಿಗಳು ಹಾಗೂ ವಧು-ವರನ ಕಡೆಯವರು ತಕ್ಷಣ ಓಡಿ ಬಂದು ಅವರಿಗೆ ಪ್ರಥಮ ಚಿಕಿತ್ಸೆ ನೀಡಲು ಪ್ರಯತ್ನಿಸಿದರು.
ಪರಶಿವಮೂರ್ತಿ ಅವರ ಸ್ಥಿತಿ ಗಂಭೀರವಾಗುತ್ತಿರುವುದನ್ನು ಕಂಡು ಮದುವೆ ಮನೆಯವರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲು ಮುಂದಾದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಆಸ್ಪತ್ರೆಗೆ ತಲುಪುವ ಮೊದಲೇ ಪರಶಿವಮೂರ್ತಿ ಅವರು ದಾರಿಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವೈದ್ಯರ ಪ್ರಕಾರ, ತೀವ್ರ ಹೃದಯಾಘಾತ ಸಂಭವಿಸಿರುವುದರಿಂದ ಅವರು ಸಾವನ್ನಪ್ಪಿದ್ದಾರೆ.
ನಗುನಗುತ್ತಾ ಎಲ್ಲರ ಫೋಟೋ ತೆಗೆಯುತ್ತಿದ್ದ ವ್ಯಕ್ತಿ ಕಣ್ಣೆದುರೇ ಮೃತಪಟ್ಟಿರುವುದು ಮದುವೆ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿತ್ತು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…