Featured

ಮದುವೆ, ರಾಜಕೀಯ ಕಾರ್ಯಕ್ರಮಗಳಿಗೆ ಪಟಾಕಿ ನಿಷೇಧ : ಸಿಎಂ – vishwanews24

ಮದುವೆ, ರಾಜಕೀಯ ಕಾರ್ಯಕ್ರಮಗಳಿಗೆ ಪಟಾಕಿ ನಿಷೇಧ ..

ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ  ..

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಛೇರಿ ಕೃಷ್ಣಾದಲ್ಲಿ ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು , ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದೆ. ಪಟಾಕಿ ಸಿಡಿಸುವಾಗ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಇನ್ನು ಮುಂದೆ ಕಠಿಣವಾಗಿ ಸುಪ್ರೀಂ ಆದೇಶವನ್ನ ಪಾಲಿಸಬೇಕು. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ದೀಪಾವಳಿ ಸಮೀಪವೇ ಬರುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದ್ದೇವೆ. ಪಟಾಕಿ ಮಾರಾಟಕ್ಕೆ ಒಮ್ಮೆ ಪರವಾನಗಿ ಪಡೆದರೆ ಐದು ವರ್ಷದ ತನಕ ನವೀಕರಣಕ್ಕೆ ಇರುತ್ತಿತ್ತು. ಆದರೆ ಈಗ ಪ್ರತಿ ವರ್ಷವೂ ಹೊಸದಾಗಿ ಲೈಸೆನ್ಸ್ ತೆಗೆದುಕೊಳ್ಳಬೇಕು. ಅದೇಶ ಪಾಲನೆ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದೆಲ್ಲೆಡೆ, ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಸೂಚಿಸಿದರು.

ಪಟಾಕಿ ಅಗ್ನಿ ದುರಂತ ತಡೆ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಹೇಳಿದ ಸಿದ್ದರಾಮಯ್ಯ, ರಾಮಸ್ವಾಮಿ ರೆಡ್ಡಿ ಎಂಬಾತ ಪಟಾಕಿ ಮಾರಾಟಕ್ಕೆ ಅನುಮತಿ ಪಡೆದಿದ್ದ. ಗೋಡೌನ್​ನಲ್ಲಿ ಮಿತಿ ಮೀರಿ ಪಟಾಕಿ ಸಂಗ್ರಹಕ್ಕೆ ಅನುಮತಿ ಪಡೆದಿರಲಿಲ್ಲ. ಹೀಗಾಗಿ ತಹಶೀಲ್ದಾರ್​, ಇನ್ಸ್​​ಪೆಕ್ಟರ್​​, ಅಗ್ನಿಶಾಮಕ ಅಧಿಕಾರಿಯನ್ನು ಅಮಾನತ್ತಿಗೆ ಆದೇಶಿಸಲಾಗಿದ್ದು, ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago