Featured

ಮದ್ಯಪ್ರಿಯರಿಗೆ ಶಾಕ್; ಎಲ್ಲಾ ರೀತಿಯ ಮದ್ಯದ ಮೇಲಿನ ಶುಲ್ಕ ಹೆಚ್ಚಳ – Vishwanews24

ಮದ್ಯಪ್ರಿಯರಿಗೆ ಶಾಕ್; ಎಲ್ಲಾ ರೀತಿಯ ಮದ್ಯದ ಮೇಲಿನ ಶುಲ್ಕ ಹೆಚ್ಚಳ

ಮದ್ಯದ ದರ ಹೆಚ್ಚಿಸಿದ ರಾಜ್ಯ ಸರ್ಕಾರ..

ಪ್ರತಿ ಮದ್ಯದ ಬಾಟಲಿಯ ಮೇಲೆ 10ರಿಂದ 20 ರೂ. ಏರಿಕೆ..

ಬೆಂಗಳೂರು: ತಾನು ಘೋಷಿಸಿರುವ ಗ್ಯಾರಂಟಿಗಳ ಹಿನ್ನೆಲೆಯಲ್ಲಿ ರಾಜ್ಯದ ಬೊಕ್ಕಸದ ಮೇಲಾಗುವ ಹಣದ ಹೊರೆಯನ್ನು ತಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಅದಕ್ಕಾಗಿ ಸಂಪನ್ಮೂನ ಕ್ರೋಢೀಕರಣಕ್ಕೆ ಸರ್ಕಾರ ಹೆಜ್ಜೆಯಿಟ್ಟಿದೆ. ಆ ಹಿನ್ನೆಲೆಯಲ್ಲಿ ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗಿದೆ.

ಅಂದರೆ, ಬಿಯರ್ ದರಗಳಲ್ಲಿ ಅಲ್ಪ ಪ್ರಮಾಣದ ಏರಿಕೆಯಾಗಲಿದೆ. ಬಡ್ ವೈಸರ್ ಬಿಯರ್ ನ ದರ 198 ರೂ.ಗಳಿಂದ 220 ರೂ.ಗಳಿಗೆ, ಯು ಬಿ ಬಿಯರ್ ದರ 130 ರೂ.ಗಳಿಂದ 135 ರೂ.ಗಳಿಗೆ, ಕಿಂಗ್ ಫಿಶರ್ ಬಿಯರ್ ದರ 160 ರೂ.ಗಳಿಂದ 170 ರೂ.ಳಿಗೆ ಏರಿಕೆಯಾಗಲಿದೆ.

ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ರಾಜ್ಯದ ಮದ್ಯ ಮಾರಾಟಗಾರರಿಂದ 35 ಸಾವಿರ ಕೋಟಿ ರೂ. ಸಂಗ್ರಹ ಮಾಡುವ ಗುರಿಯನ್ನು ಹೊಂದಿತ್ತು. ಆದರೆ, ಸಂಗ್ರಹವಾಗಿದ್ದು 29 ಸಾವಿರ ಕೋಟಿ ರೂ. ಮಾತ್ರ. ಾಗ, ಬಿಜೆಪಿ ಸರ್ಕಾರ ಯಾವುದೇ ಗ್ಯಾರಂಟಿಗಳನ್ನು ಘೋಷಣೆ ಮಾಡಿರಲಿಲ್ಲ. ಆದರೆ, ಈಗ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಿಸಿರುವುದರಿಂದ ಮದ್ಯದ ಬೆಲೆಯನ್ನು ಅನಿವಾರ್ಯವಾಗಿ ಹೆಚ್ಚಿಸಿ ರಾಜ್ಯದ ಬೊಕ್ಕಸಕ್ಕೆ ಹಣ ತುಂಬಿಸುವ ಕೆಲಸ ಮಾಡಿದೆ.

2023-24ನೇ ವರ್ಷದಲ್ಲಿ ಅಂದಾಜು 35 ಸಾವಿರ ಕೋಟಿ ರೂ.ಮೌಲ್ಯದ ಮದ್ಯ ಮಾರಾಟ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಆ ಮೂಲಕ, 65 ಸಾವಿರ ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಈ ಮೂಲಕ ಐದು ಗ್ಯಾರಂಟಿಗಳ ಜಾರಿಗಾಗಿ ಬೇಕಾಗುವ ಸಂಪನ್ಮೂಲವನ್ನು ಸಂಗ್ರಹಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago