Featured

ಮದ್ಯಪ್ರಿಯರಿಗೆ ಶಾಕ್; ಎಲ್ಲಾ ರೀತಿಯ ಮದ್ಯದ ಮೇಲಿನ ಶುಲ್ಕ ಹೆಚ್ಚಳ – Vishwanews24

ಮದ್ಯಪ್ರಿಯರಿಗೆ ಶಾಕ್; ಎಲ್ಲಾ ರೀತಿಯ ಮದ್ಯದ ಮೇಲಿನ ಶುಲ್ಕ ಹೆಚ್ಚಳ

ಮದ್ಯದ ದರ ಹೆಚ್ಚಿಸಿದ ರಾಜ್ಯ ಸರ್ಕಾರ..

ಪ್ರತಿ ಮದ್ಯದ ಬಾಟಲಿಯ ಮೇಲೆ 10ರಿಂದ 20 ರೂ. ಏರಿಕೆ..

ಬೆಂಗಳೂರು: ತಾನು ಘೋಷಿಸಿರುವ ಗ್ಯಾರಂಟಿಗಳ ಹಿನ್ನೆಲೆಯಲ್ಲಿ ರಾಜ್ಯದ ಬೊಕ್ಕಸದ ಮೇಲಾಗುವ ಹಣದ ಹೊರೆಯನ್ನು ತಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಅದಕ್ಕಾಗಿ ಸಂಪನ್ಮೂನ ಕ್ರೋಢೀಕರಣಕ್ಕೆ ಸರ್ಕಾರ ಹೆಜ್ಜೆಯಿಟ್ಟಿದೆ. ಆ ಹಿನ್ನೆಲೆಯಲ್ಲಿ ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗಿದೆ.

ಅಂದರೆ, ಬಿಯರ್ ದರಗಳಲ್ಲಿ ಅಲ್ಪ ಪ್ರಮಾಣದ ಏರಿಕೆಯಾಗಲಿದೆ. ಬಡ್ ವೈಸರ್ ಬಿಯರ್ ನ ದರ 198 ರೂ.ಗಳಿಂದ 220 ರೂ.ಗಳಿಗೆ, ಯು ಬಿ ಬಿಯರ್ ದರ 130 ರೂ.ಗಳಿಂದ 135 ರೂ.ಗಳಿಗೆ, ಕಿಂಗ್ ಫಿಶರ್ ಬಿಯರ್ ದರ 160 ರೂ.ಗಳಿಂದ 170 ರೂ.ಳಿಗೆ ಏರಿಕೆಯಾಗಲಿದೆ.

ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ರಾಜ್ಯದ ಮದ್ಯ ಮಾರಾಟಗಾರರಿಂದ 35 ಸಾವಿರ ಕೋಟಿ ರೂ. ಸಂಗ್ರಹ ಮಾಡುವ ಗುರಿಯನ್ನು ಹೊಂದಿತ್ತು. ಆದರೆ, ಸಂಗ್ರಹವಾಗಿದ್ದು 29 ಸಾವಿರ ಕೋಟಿ ರೂ. ಮಾತ್ರ. ಾಗ, ಬಿಜೆಪಿ ಸರ್ಕಾರ ಯಾವುದೇ ಗ್ಯಾರಂಟಿಗಳನ್ನು ಘೋಷಣೆ ಮಾಡಿರಲಿಲ್ಲ. ಆದರೆ, ಈಗ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಿಸಿರುವುದರಿಂದ ಮದ್ಯದ ಬೆಲೆಯನ್ನು ಅನಿವಾರ್ಯವಾಗಿ ಹೆಚ್ಚಿಸಿ ರಾಜ್ಯದ ಬೊಕ್ಕಸಕ್ಕೆ ಹಣ ತುಂಬಿಸುವ ಕೆಲಸ ಮಾಡಿದೆ.

2023-24ನೇ ವರ್ಷದಲ್ಲಿ ಅಂದಾಜು 35 ಸಾವಿರ ಕೋಟಿ ರೂ.ಮೌಲ್ಯದ ಮದ್ಯ ಮಾರಾಟ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಆ ಮೂಲಕ, 65 ಸಾವಿರ ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಈ ಮೂಲಕ ಐದು ಗ್ಯಾರಂಟಿಗಳ ಜಾರಿಗಾಗಿ ಬೇಕಾಗುವ ಸಂಪನ್ಮೂಲವನ್ನು ಸಂಗ್ರಹಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

9 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

26 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

36 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

51 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

1 hour ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

1 hour ago