ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ದಿನಸಿ ವಸ್ತುಗಳು, ತರಕಾರಿಗಳ ದರ ಏರಿಕೆ ನಡುವೆ ಸರ್ಕಾರ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಸಲು ಸರ್ಕಾರ ಮುಂದಾಗಿದ್ದು ಜುಲೈ 1ರಿಂದ ಭಾರಿ ಬೆಲೆಯ ಬ್ರ್ಯಾಂಡ್ಗಳ ಮದ್ಯದ ದರ ಅಗ್ಗವಾಗಲಿದೆ. ನೆರೆಹೊರೆಯ ರಾಜ್ಯಗಳಲ್ಲಿನ ಮದ್ಯದ ಬೆಲೆಗೆ ಅನುಗುಣವಾಗಿ ರಾಜ್ಯದಲ್ಲೂ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಬ್ರಾಂಡ್ಗಳ ಮದ್ಯದ ಬೆಲೆಯನ್ನು ಪರಿಷ್ಕರಿಸುವುದಾಗಿ ಸರಕಾರ ಕಳೆದ ಫೆಬ್ರುವರಿಯಲ್ಲಿ ಮಂಡಿಸಿದ್ದ ಬಜೆಟ್ನಲ್ಲೇ ಘೋಷಿಸಿತ್ತು. ಅದು ಇದೀಗ ಜಾರಿಯಾಗುತ್ತಿದೆ.
ಹೊರ ರಾಜ್ಯಗಳಲ್ಲಿನ ಮದ್ಯದ ದರಪಟ್ಟಿ ಆಧರಿಸಿ ಹೊಸದಾಗಿ ಬೆಲೆ ನಿಗದಿಪಡಿಸಲಾಗಿದೆ. ಅಬಕಾರಿ ಆದಾಯ ಸಂಗ್ರಹ ಹೆಚ್ಚಳಕ್ಕಾಗಿ ರಾಜ್ಯ ಸರಕಾರ ಸತತವಾಗಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಹೆಚ್ಚಿಸುತ್ತಲೇ ಬಂದಿತ್ತು. 2023ರ ಜುಲೈನಲ್ಲಿ ಭಾರತೀಯ ಉತ್ಪಾದಿತ ಮದ್ಯದ (ಐಎಂಎಲ್) ಮೇಲಿನ ಎಇಡಿ ಹೆಚ್ಚಿಸಿದ್ದರೆ, 2024ರ ಜನವರಿಯಲ್ಲಿ ಬಿಯರ್ ಮೇಲಿನ ಎಇಡಿ ಹೆಚ್ಚಿಸಲಾಗಿತ್ತು. ಇದೇ ಮೊದಲ ಬಾರಿಗೆ ಎಇಡಿ ಕಡಿಮೆ ಮಾಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಅಬಕಾರಿ ತೆರಿಗೆ ಇಳಿಕೆ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ ನೀಡಿದೆ.
ಹೆಚ್ಚುವರಿ ಅಬಕಾರಿ ತೆರಿಗೆ ಪ್ರಮಾಣ ರಾಜ್ಯದಲ್ಲಿ ಹೆಚ್ಚು ಇರುವ ಕಾರಣದಿಂದ ನೆರೆಹೊರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್ಗಳ ಮದ್ಯದ ದರ ದುಬಾರಿಯಾಗಿದೆ. ಈ ಕಾರಣಕ್ಕೆ ದೊಡ್ಡ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮವಾಗಿ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಪೂರೈಕೆಯಾಗುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ನಷ್ಟವಾಗುತ್ತಿದೆ. ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ಎಇಡಿ ದರ ಪರಿಷ್ಕರಣೆ ನಿರ್ಧಾರ ಮಾಡಿದೆ.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…