ಬೆಂಗಳೂರು: ಮಧುಕರ ಶೆಟ್ಟಿ ಅಭಿಮನ್ಯ ಇದ್ದ ಹಾಗೆ. ದೇಶದಲ್ಲಿ ಅವರಂತಹವರ ಸಂಖ್ಯೆ ಕಡಿಮೆ ಇದ್ದರೂ ಒಂದು ದಿನ ಭ್ರಷ್ಟಾಚಾರ ನಿರ್ಮೂಲನೆ ಯುದ್ಧದಲ್ಲಿ ಗೆಲುವು ಸಿಗುತ್ತದೆ. ಹಾಗಾಗಿ ಮಧುಕರಶೆಟ್ಟಿ ಅವರ ಜನ್ಮ ದಿನ ಭ್ರಷ್ಟಾಚಾರ ನಿರ್ಮೂಲನ ದಿನವಾಗಿ ರೂಪಾಂತರವಾಗಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾ. ಎನ್. ಕೆ. ಸುಧೀಂದ್ರರಾವ್ ಹೇಳಿದ್ದಾರೆ.
ಡಾ. ಕೆ. ಮಧುಕರಶೆಟ್ಟಿ ಅವರ ಅಭಿಮಾನ ಬಳಗ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ದಿ.ಡಾ.ಕೆ. ಮಧುಕರಶೆಟ್ಟಿ ಅವರ 50ನೇ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಭ್ರಷ್ಟಾಚಾರ ಮತ್ತು ಜಾತಿ ವ್ಯವಸ್ಥೆ ಎಂಬ ಎರಡು ಕ್ಯಾನ್ಸರ್ಗಳಿಂದ ಸಮಾಜ ನಲುಗುತ್ತಿದ್ದು, ಒಬ್ಬ ವ್ಯಕ್ತಿ ತನ್ನ ಬದಕಿಗೆ ಮೀರಿ ಮಾಡಿದ ಆಸ್ತಿಯೆಲ್ಲವೂ ಅಕ್ರಮ ಆಸ್ತಿಯೇ. ಭ್ರಷ್ಟಾಚಾರ ಮತ್ತು ಜಾತಿ ವ್ಯವಸ್ಥೆ ಎಂಬ ಕ್ಯಾನ್ಸರ್ ತೊಡದು ಹಾಕಬೇಕಾದರೆ ಮಧುಕರ ಶೆಟ್ಟಿಯಂತಹ ಪ್ರಾಮಾಣಿಕ ವ್ಯಕ್ತಿತ್ವಗಳು ರೂಪಗೊಳ್ಳಬೇಕು” ಎಂದರು.
ಇನ್ನು ದಿವಂಗತ ಎಂಬ ಪದಕ್ಕೆ ಮಧುಕರಶೆಟ್ಟಿ ಅರ್ಹರಾಗಿದ್ದು, ಅವರು ಸ್ವರ್ಗ ಲೋಕದಲ್ಲಿ ಸಿಂಹಾಸನ ರೂಢರಾಗಿರುತ್ತಾರೆ. ನಾನು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿ ನಿಯೋಜನೆಗೊಂಡ ವೇಳೆ ಮಧುಕರಶೆಟ್ಟಿ ಭೇಟಿ ಮಾಡಿದ್ದರು. ಭ್ರಷ್ಟಾಚಾರ ಪ್ರಕರಣಗಳ ವಿಚಾರದಲ್ಲಿ ಸಾಕಷ್ಟು ಬಾರಿ ನನ್ನೊಂದಿಗೆ ಚರ್ಚಿಸಿದ್ದರು. ಅವರ ಜನ್ಮ ಜಯಂತಿ ಭ್ರಷ್ಟಾಚಾರ ವಿರೋಧಿ ಆಂದೋಲನವಾಗಿ ರೂಪಾಂತರವಾಗಲಿ” ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…