ತುಮಕೂರು: ಸೋಲನ್ನ ಸ್ಪೂರ್ತಿ ಎಂದು ಸ್ವೀಕಾರ ಮಾಡಬೇಕು. ಒಂದು ಸೋಲಿಗೆ ಅಂಜಬಾರದು. ಸೋತರೂ ಮತಕೊಟ್ಟ 6.9 ಲಕ್ಷ ಜನರಿಗೆ ನನ್ನ ನಮಸ್ಕಾರ. ನಾನು 15 ಚುನಾವಣೆಗೆ ನಿಂತಿದ್ದಿನಿ. ಸೋಲು ಗೆಲುವು ಸಾಮಾನ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ತುಮಕೂರಿನಲ್ಲಿ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಇನ್ನು ಮೂರ್ನಾಲ್ಕು ತಿಂಗಳಲ್ಲಿ ದೈವೇಚ್ಛೆ ಏನೋ ನಡೀತದೆ. ಮಧ್ಯಂತರ ಚುನಾವಣೆ ಬರೋದು ಗ್ಯಾರಂಟಿ. ಅದಕ್ಕೆ ನೀವೆಲ್ಲಾ ತಯಾರಾಗಬೇಕು ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತ ರಿಗೆ ಜೆಡಿಎಸ್ ವರಿಷ್ಠ ದೇವೇಗೌಡರು ಕರೆ ನೀಡಿದರು. ಬಡವರ ಕಷ್ಟಕ್ಕೆ ಸ್ಪಂಧಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಹೇಳುತ್ತೆನೆ. ಅವರು ಈ ರಾಜ್ಯದ 6.5 ಕೋಟಿ ಜನರ ಮುಖ್ಯಮಂತ್ರಿ ನಮ್ಮಲ್ಲಿ ರಾಜಕೀಯ ಭಿನ್ನಾಭಿಪ್ರಾಯ ಇರಬಹುದು. ಆದರೆ, ಬಡವರಿಗೆ ಮೋಸ ಮಾಡಬಾರದು ಎಂದರು.
ಮಾಧ್ಯಮಗಳಿಂದ ಪ್ರಧಾನಿ ನರೇಂದ್ರ ಅವರು ರಾಷ್ಟ್ರಪಿತ ಆಗಿದ್ದಾರೆ. ವಿಶ್ವದಲ್ಲಿ ಗಾಂಧಿಜಿಗೆ ಮಾತ್ರ ರಾಷ್ಟ್ರಪಿತ ಅಂತಿದ್ರು. ಯಾರಿಗೂ ಆ ಪದವನ್ನು ಬಳಕೆ ಮಾಡುವ ಅಧಿಕಾರ ಇಲ್ಲ ಕಾಂಗ್ರೆಸ್ ಗೂ ಇಲ್ಲ ನನಗೂ ಇಲ್ಲ ಎಂದು ಹೇಳಿದರು. ಪಕ್ಷದ ಕಾರ್ಯಕರ್ತರೇ ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿ ಮುಂದೆ ನಿಮ್ಮದೆ ಸರ್ಕಾರ ಬರುತ್ತೆ ಸಿಎಂ ಯಡಿಯೂರಪ್ಪ ನವರು ಅಕ್ಟೋಬರ್ 10,11,12 ಮೂರು ದಿನ ಮಾತ್ರ ಅಧಿವೇಶನ ಇಟ್ಟುಕೊಂಡಿದ್ದಾರೆ. ಇದು ದುರಂತದ ವಿಚಾರ. ಮೂರು ದಿನಕ್ಕೆ 9 ತಿಂಗಳ ಬಜೆಟ್ ಅನುಮೋದನೆ ಮಾಡಬೇಕು ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…