ನವದೆಹಲಿ: ಮಧ್ಯಪ್ರದೇಶದಲ್ಲಿ ಅತಂತ್ರ ವಿಧಾನಸಭೆಯು ನಿರ್ಮಾಣವಾಗಿರುವ ಕಾರಣದಿಂದ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಗೆ ಬೆಂಬಲ ನೀಡುವುದಾಗಿ ಬಹುಜನ ಸಮಾಜ ಪಕ್ಷ(ಬಿಎಸ್ ಪಿ) ನಾಯಕಿ ಮಾಯಾವತಿ ಹೇಳಿದ್ದಾರೆ.
ಕಾಂಗ್ರೆಸ್ ನ ಹಲವು ನೀತಿಗಳಿಗೆ ನನ್ನ ಸಹಮತವಿಲ್ಲ, ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದು ನಮ್ಮ ಗುರಿ. ಇದರಿಂದಾಗಿ ಮಧ್ಯಪ್ರದೇಶದಲ್ಲಿ ನಾವು ಕಾಂಗ್ರೆಸ್ ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಮಾಯಾವತಿ ಇಂದು ಬೆಳಗ್ಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಐದು ರಾಜ್ಯಗಳ ಫಲಿತಾಂಶಗಳು ಬಿಜೆಪಿ ವಿರುದ್ಧದ ಜನಾದೇಶವಾಗಿದೆ. ಅದರಲ್ಲೂ ಛತ್ತೀಸ್ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಜನತೆ ಬಿಜೆಪಿ ಮತ್ತು ಅದರ ಜನವಿರೋಧಿ ನೀತಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಪರ್ಯಾಯ ಆಯ್ಕೆಯಿಲ್ಲದೆ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದಾರೆ ಎಂದು ಬಿಎಸ್ಪಿ ನಾಯಕಿ ನುಡಿದರು.
ರಾಜಸ್ಥಾನದಲ್ಲೂ ನಾವು ಕಾಂಗ್ರೆಸ್ ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದಲೇ ನಾವು ಈ ಚುನಾವಣೆ ಎದುರಿಸಿದ್ದೇವೆ ಎಂದರು.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಹುಮತದಿಂದ ವಂಚಿತವಾಗಿ 114 ಸ್ಥಾನದೊಂದಿಗೆ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ಬಿಎಸ್ ಪಿ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ 109 ಸ್ಥಾನ ಪಡೆದಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…