ಭೋಪಾಲ್ : ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಪತನದ ಕೌಂಟ್ ಡೌನ್ ಶುರುವಾಗಿದೆ. ಸಿಎಂ ಕಮಲನಾಥ್ ವಿರುದ್ಧ ಬಂಡಾಯ ಸಾರಿರುವ ಜ್ಯೋತಿರಾದಿತ್ಯ ಸಿಂಧ್ಯಾ ಬೆಂಬಲಿತ ಕಾಂಗ್ರೆಸ್ ಶಾಸಕರು ರೆಸಾರ್ಟ್ ರಾಜಕೀಯ ಸ್ಟಾರ್ಟ್ ಮಾಡಿದ್ದಾರೆ.
ಇದರಿಂದ ಕಮಲ್ ನಾಥ್ ಅವರ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಹೀಗಾಗಿ ಸೋಮವಾರ ರಾತ್ರಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ , ವಕೀಲ ಹಾಗೂ ರಾಜ್ಯಸಭಾ ಸಂಸದರಾಗಿರುವ ವಿವೇಕ್ ಟಂಕಾ, ವಿರೋಧ ಪಕ್ಷದ ಮಾಜಿ ನಾಯಕ ಅಜಯ್ ಸಿಂಗ್ ಸೇರಿ 10 ಮಂದಿ ಸಚಿವರ ಜೊತೆ ರಾಜ್ಯದಲ್ಲಿ ಹೇಗೆ ಕಾಂಗ್ರೆಸ್ ಸರ್ಕಾರವನ್ನು ಉಳಿಸಿಕೊಳ್ಳುವುದು ಎಂಬುದರ ಬಗ್ಗೆ ಸಿಎಂ ಕಮಲ್ ನಾಥ್ ಸುದೀರ್ಘ ಚರ್ಚೆ ನಡೆಸಿದ್ದಾರೆ. ಶಾಸಕರ ರಾಜೀನಾಮೆ ಆಟ ಮುಂದುವರಿದರೆ ಇದು ಬಿಜೆಪಿಗೆ ವರದಾನವಾಗಲಿದೆ.
ಮಧ್ಯಪ್ರದೇಶದಲ್ಲಿ ರಾಜಕೀಯ ಅಸ್ಥಿರತೆ ಕಾಡಿದ್ದು, ಆಡಳಿತ ಪಕ್ಷದೊಳಗಿನ ಭಿನ್ನಮತ ತಾರಕಕ್ಕೇರಿದ ಪರಿಣಾಮ ಮುಖ್ಯಮಂತ್ರಿ ಕಮಲನಾಥ್ ಅವರು ಸಚಿವ ಸಂಪುಟದ ಎಲ್ಲ 20 ಸಹೋದ್ಯೋಗಿಗಳ ರಾಜೀನಾಮೆಯನ್ನು ಸೋಮವಾರ ತಡರಾತ್ರಿ ಪಡೆದಿದ್ದಾರೆ. ಇಷ್ಟಾಗ್ಯೂ ಪರಿಸ್ಥಿತಿ ಕೈ ಮೀರುತ್ತಿರುವ ಕಾರಣ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವುದಕ್ಕೆ ದೌಡಾಯಿಸಿದ್ದಾರೆ.
ಸೋಮವಾರ ತಡರಾತ್ರಿ ಸಚಿವ ಸಂಪುಟ ಸಭೆ ನಡೆಸಿದ್ದ ಕಮಲನಾಥ್, 11.30ರ ಹೊತ್ತಿಗೆ ಎಲ್ಲ 20 ಸಚಿವರ ರಾಜೀನಾಮೆ ಪಡೆದುಕೊಂಡಿದ್ದರು. ರಾತ್ರಿ 11.40ರ ಹೊತ್ತಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಜ್ಜನ್ ಸಿಂಗ್ ವರ್ಮಾ, ಜನರಿಂದ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರತಿಪಕ್ಷದ ಎಲ್ಲ ಪ್ರಯತ್ನಗಳನ್ನೂ ವಿಫಲಗೊಳಿಸಲಾಗುವುದು ಎಂದು ಹೇಳಿದ್ದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…