Featured

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆಯೂ ಮಂಗಳೂರು-ಮಸ್ಕತ್ ವಿಮಾನ ಯಾನ ಆರಂಭಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ – vishwanews24

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆಯೂ ಮಂಗಳೂರು-ಮಸ್ಕತ್ ವಿಮಾನ ಯಾನ ಆರಂಭಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್

ಮಂಗಳೂರು: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯು ವಿಮಾನಯಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುತ್ತಿದ್ದರೂ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಗಳು ಮಂಗಳೂರು-ಮಸ್ಕತ್ ಸೇರಿದಂತೆ ಮಾರ್ಚ್ 10ರ ನಿಗದಿತ ಸೇವೆಗಳನ್ನು ಘೋಷಿಸಿವೆ. ಅಲ್ಲದೆ, ಭಾರತ ಮತ್ತು ಯುಎಇ ನಡುವೆ ಹೆಚ್ಚುವರಿ ವಿಮಾನಗಳ ಸಂಚಾರಕ್ಕೂ ಯೋಜನೆ ರೂಪಿಸಿವೆ.

‘ಗಲ್ಫ್ ನ್ಯೂಸ್’ ವರದಿಯ ಪ್ರಕಾರ, ಸೌದಿ ಅರೇಬಿಯಾ ಮತ್ತು ಓಮನ್ ವಾಯುಪ್ರದೇಶಗಳು ಮುಕ್ತವಾಗಿವೆ. ಹೀಗಾಗಿ ಎರಡೂ ವಿಮಾನಯಾನ ಸಂಸ್ಥೆಗಳು ಆಯ್ದ ಕಾರ್ಯಾಚರಣೆಗಳನ್ನು ಮುಂದುವರಿಸಲು ಸಾಧ್ಯವಾಗಿದೆ. ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜಂಟಿಯಾಗಿ ಜಿದ್ದಾಗೆ 14 ವಿಮಾನಗಳನ್ನು ಓಡಿಸಲಿವೆ. ಅದೇ ರೀತಿ, ಮಂಗಳೂರು-ಮಸ್ಕತ್-ಮಂಗಳೂರು (IX817 / IX818) ಸೇರಿದಂತೆ ಮಸ್ಕತ್‌ಗೆ ಒಟ್ಟು 14 ವಿಮಾನಗಳು ಸಂಚರಿಸಲಿವೆ.

ಇದನ್ನೂ ಓದಿ:👇

ಮಾರ್ಚ್ 10 ರಂದು, ಏರ್ ಇಂಡಿಯಾ ಸಂಸ್ಥೆಯು ದೆಹಲಿಯಿಂದ ಒಂದು ಸುತ್ತಿನ ಪ್ರಯಾಣ ಹಾಗೂ ಮುಂಬೈನಿಂದ ಜೆದ್ದಾಗೆ ಎರಡು ಸುತ್ತಿನ ವಿಮಾನಯಾನ ಸೇವೆಗಳನ್ನು ನಡೆಸಲಿದೆ. ಇನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಬೆಂಗಳೂರು, ಹೈದರಾಬಾದ್, ಮಂಗಳೂರು ಮತ್ತು ಕೋಝಿಕ್ಕೋಡ್‌ನಿಂದ ಜೆದ್ದಾ ಸೇವೆಗಳನ್ನು ನಿರ್ವಹಿಸಲಿದ್ದು, ಮಂಗಳೂರು-ಜೆದ್ದಾ-ಮಂಗಳೂರು (IX845 / IX846) ವಿಮಾನವು ಕೂಡ ಇಂದಿನ ವೇಳಾಪಟ್ಟಿಯಲ್ಲಿದೆ.

ಮಸ್ಕತ್‌ಗೆ ಸಂಬಂಧಿಸಿದಂತೆ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ದೆಹಲಿ, ಕಣ್ಣೂರು, ಕೊಚ್ಚಿ, ಕೋಝಿಕ್ಕೋಡ್, ಮುಂಬೈ, ತಿರುವನಂತಪುರಂ, ತಿರುಚಿರಾಪಳ್ಳಿ ಮತ್ತು ಮಂಗಳೂರಿನಿಂದ ನಿಗದಿತ ವಿಮಾನಯಾನ ಸೇವೆಗಳನ್ನು ನಡೆಸಲಿದೆ. ಮಂಗಳೂರು-ಮಸ್ಕತ್ ವಿಮಾನವು ಕೂಡ ಈ ನಿಗದಿತ ಕಾರ್ಯಾಚರಣೆಯ ಭಾಗವಾಗಿದೆ.

ಇದನ್ನೂ ಓದಿ:👇

ನಿಗದಿತ ಸೇವೆಗಳ ಜೊತೆಗೆ, ಮಾರ್ಚ್ 10 ರಂದು ಭಾರತದ ವಿವಿಧ ನಗರಗಳು ಮತ್ತು ಯುಎಇ ನಡುವೆ 32 ಹೆಚ್ಚುವರಿ ವಿಮಾನಗಳನ್ನು ಘೋಷಿಸಲಾಗಿದೆ. ಇವುಗಳಿಗೆ ಭಾರತೀಯ ಮತ್ತು ಸ್ಥಳೀಯ ನಿಯಂತ್ರಕ ಪ್ರಾಧಿಕಾರಗಳಿಂದ ಅಗತ್ಯ ಅನುಮತಿ ಪಡೆಯಲಾಗಿದೆ. ಏರ್ ಇಂಡಿಯಾ ದುಬೈಗೆ 10 ಹೆಚ್ಚುವರಿ ವಿಮಾನಗಳನ್ನು ಓಡಿಸಿದರೆ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಬುಧಾಬಿ, ಶಾರ್ಜಾ ಮತ್ತು ರಾಸ್ ಅಲ್ ಖೈಮಾಗೆ 18 ಹೆಚ್ಚುವರಿ ವಿಮಾನಗಳು ಸಂಚರಿಸಲಿವೆ.

ಪಶ್ಚಿಮ ಏಷ್ಯಾದ ಇತರ ಕೆಲವು ಸ್ಥಳಗಳಿಗೆ ಏರ್ ಇಂಡಿಯಾ ಗ್ರೂಪ್ ಮಾರ್ಚ್ 13 ರವರೆಗೆ ತನ್ನ ನಿಗದಿತ ಕಾರ್ಯಾಚರಣೆಗಳನ್ನು ರದ್ದುಗೊಳಿಸಿದೆ. ರದ್ದಾದ ವಿಮಾನಗಳಲ್ಲಿ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಭವಿಷ್ಯದ ದಿನಾಂಕಗಳಲ್ಲಿ ಮರು-ಬುಕಿಂಗ್ ಮಾಡಲು ಅವಕಾಶ ನೀಡಲಾಗಿದ್ದು, ಯಾವುದೇ ಹೆಚ್ಚುವರಿ ಶುಲ್ಕ ವಿಧಿಸಲಾಗುವುದಿಲ್ಲ. ಅಥವಾ ಪೂರ್ಣ ಹಣ ಮರುಪಾವತಿ ಪಡೆಯುವ ಆಯ್ಕೆಯನ್ನು ನೀಡಲಾಗಿದೆ.

ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ ಏರ್ ಇಂಡಿಯಾದ ಅಧಿಕೃತ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು.

ಇದನ್ನೂ ಓದಿ:👇

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

6 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

6 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

7 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

7 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

7 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

7 days ago