ಉಡುಪಿ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಕೆಲವು ಸೂಚನೆಗಳನ್ನು ನೀಡಿದೆ.
ವೈಮಾನಿಕ ನಿರ್ಬಂಧ ಮತ್ತು ಕೊಲ್ಲಿ ಪ್ರದೇಶದ ಪ್ರಚಲಿತ ಸ್ಥಿತಿಗತಿಯಂದ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿಕೊಳ್ಳುವಂತಾಗಿದೆ.
ಇದನ್ನೂ ಓದಿ 👇:
ಜಿಲ್ಲಾಡಳಿತದ ಕ್ರಮಗಳು: ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದ್ದು, ಮಾಹಿತಿಗಳನ್ನು ಹಂಚಿಕೊಳ್ಳಲಿದೆ.
ಉಡುಪಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಉಡುಪಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ:0820-2574802 (1077-ಟೋಲ್ ಫ್ರೀ), ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ದೂ.ಸಂಖ್ಯೆ: 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದಾಗಿದೆ.
ಇದನ್ನೂ ಓದಿ 👇:
ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿ ರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿ ಅಥವಾ ಸಾರಥಿ ಸಹಾಯತಾ (Sarthi Sahayata) ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬಹುದು.
ವೀಸಾಗೆ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…