ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಇನ್ನೂ ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.
ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಸರ್ಕಾರ ಈಗಾಗಲೇ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮಗಳನ್ನು ಕೈಗೊಂಡಿದೆ. ಮಧ್ಯಪ್ರಾಚ್ಯ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ತೊಂದರೆಗಳಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು ಏರಿಕೆಯಾಗಿವೆ” ಎಂದರು.
ಇದನ್ನೂ ಓದಿ:
“ಭಾರತವು ಇಂಧನ ಹಾಗೂ ರಸಗೊಬ್ಬರಗಳ ಆಮದಿನ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಇದರ ಪರಿಣಾಮ ದೇಶದ ಮೇಲೂ ಕಾಣಿಸಿಕೊಳ್ಳಲು ಆರಂಭವಾಗಿದೆ. ಈ ಪರಿಸ್ಥಿತಿ ಇನ್ನೂ ಮುಂದುವರಿದರೆ ಸರ್ಕಾರ ಇಂಧನ ಬೆಲೆ ಏರಿಕೆಯ ಭಾರವನ್ನು ಸಾರ್ವಜನಿಕರ ಮೇಲೆ ಹಾಕಬೇಕಾದ ಪರಿಸ್ಥಿತಿ ಬರಬಹುದು” ಎಂದು ಎಚ್ಚರಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…