ಬೆಂಗಳೂರು: ಇಂದು ಮಧ್ಯಾಹ್ನ ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಭೋಜನಕೂಟದ ಬಳಿಕ ಎಲ್ಲರೂ ಜೊತೆಯಾಗಿ ಹೋಗಿ ರಾಜೀನಾಮೆ ಕೊಡಲು ಹೋಗೋಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
75 ವರ್ಷ ವಯಸ್ಸಾಗಿದ್ರೂ ಪಕ್ಷ ನನಗೆ ಸಿಎಂ ಸ್ಥಾನ ನೀಡಿ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಪ್ರಧಾನಿ ಮೋದಿ, ಜೆಪಿ ನಡ್ಡಾ, ಅಮಿತ್ ಶಾ ಅವರಿಗೆ ಈ ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಈ ರಾಜೀನಾಮೆಯನ್ನು ನೋವಿನಂದಲ್ಲ, ಸಂತೋಷದಿಂದ ನೀಡುತ್ತಿದ್ದೇನೆ ಎಂದರು.
ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಕೇಂದ್ರದ ನಾಯಕರು ಅಪೇಕ್ಷೆ ಹೊಂದಿದ್ದಾರೆ. ಮೋದಿ, ನಡ್ಡಾ ಮತ್ತು ಶಾ ಅವರಿಗೆ ಪದಗಳಲ್ಲಿ ಅಭಿನಂದನೆ ಸಲ್ಲಿಸಲು ಆಗಲ್ಲ. ಮತ್ತೆ ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡೋಣ ಎಂದು ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಸಂದರ್ಭವನ್ನು ಮೆಲುಕು ಹಾಕಿದ ಅವರು, ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿದ ನಾನು, ಶಿವಮೊಗ್ಗದ ಶಿಕಾರಿಪುರದಿಂದ ರಾಜಕೀಯ ಜೀವನ ಆರಂಭಿಸಿದೆ. ಅಂದು ಮೊದಲ ಬಾರಿಗೆ ಇಬ್ಬರು ಶಾಸಕರಾಗಿ ಆಯ್ಕೆಯಾಗಿದ್ದೇವು. ಆದ್ರೆ ನನ್ನ ಜೊತೆಯಲ್ಲಿದ್ದ ಮತ್ತೊಬ್ರು ರಾಜೀನಾಮೆ ನೀಡಿದಾಗ ಏಕಾಂಗಿಯಾಗಿ ಹೋರಾಟ ನಡೆಸಿದ್ದೇನೆ. ಅಂದು ಆಯೋಜಿಸಿದ ಕಾರ್ಯಕ್ರಮಗಳನ್ನು ನೋಡಿ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್ ಅಚ್ಚರಿ ವ್ಯಕ್ತಪಡಿಸಿದ್ದರು ಎಂದು ಹೇಳಿದರು.
ಕೇಂದ್ರದಲ್ಲಿ ವಾಜಪೇಯಿ ಸರ್ಕಾರ ರಚನೆಯಾಗಿತ್ತು. ಅಂದು ವಾಜಪೇಯಿ ಅವರು ಕೇಂದ್ರದ ಸಚಿವರಾಗುವಂತೆ ಹೇಳಿದ್ದರು. ಇಲ್ಲ ನಾನು ರಾಜ್ಯದಲ್ಲಿ ಪಕ್ಷ ಕಟ್ಟಬೇಕು. ದೆಹಲಿ ರಾಜಕಾರಣಕ್ಕೆ ಬರಲ್ಲ ಅಂತ ವಿನಮ್ರದಿಂದ ಹೇಳಿದೆ ಎಂದು ಹೇಳಿ ಭಾವುಕರಾದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…