ಬೆಂಗಳೂರು: ಸಂತ್ರಸ್ತೆ ಯುವತಿಗೆ ಜೀವ ಭಯ ಹಾಗೂ ಜೀವ ಬೆದರಿಕೆ ಇರುವ ಕಾರಣ, ಯುವತಿ ನನ್ನ ಮೂಲಕ ದೂರು ನೀಡುತ್ತಾಳೆಂದು ತಿಳಿಸಿದ್ದು, ಸಂತ್ರಸ್ತೆ ಯುವತಿಯೇ ಸ್ವತಃ ಬರೆದುಕೊಟ್ಟಿರುವ ದೂರನ್ನು ನಾನು ಮಧ್ಯಾಹ್ನ 2.30ಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಲ್ಲಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿ ಪರ ವಕೀಲ ಜಗದೀಶ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಸಿಡಿಯಲ್ಲಿರುವ ಯುವತಿಯ ಕಾನೂನಿನ ಸಹಾಯಕ್ಕೆ ನಾವು ಸಿದ್ದ ಎಂದು ಬಹಿರಂಗ ಹೇಳಿಕೆ ನೀಡಿದ್ದೇವು. ನನ್ನನ್ನೂ ಸೇರಿ ಎಂಟು ನ್ಯಾಯವಾದಿಗಳು ಆಕೆ ಸಹಾಯ ಮಾಡುತ್ತಿದ್ದೇವೆ. ಸಿಡಿಯಲ್ಲಿರುವ ಯುವತಿ ಸಾಮಾನ್ಯ ಮಹಿಳೆಯಾಗಿದ್ದಾರೆ..ಆಕೆ ಕೂಡ ನನಗೆ ರಕ್ಷಣೆ ಬೇಕೆಂದು ಬಹಿರಂಗವಾಗಿಯೇ ಒಂದು ವೀಡಿಯೋ ಬಿಡುಗಡೆ ಮಾಡಿದ್ದಳು ಹೀಗಾಗಿ ಆಕೆ ಪೊಲೀಸರಿಗೆ ಹೇಳಿಕೆ ನೀಡುವುದಕ್ಕೆ ನಾವು ಸಹಾಯ ಮಾಡುತ್ತಿದ್ದೇವೆ. ಇಂದು ಆಕೆಯೇ ಒಂದು ಲಿಖಿತ ದೂರು ಬರೆದು ಕಳುಹಿಸಿದ್ದಾಳೆ. ಹೀಗಾಗಿ ಆಕೆ ಪೊಲೀಸರಿಗೆ ಹೇಳಿಕೆ ನೀಡುವುದಕ್ಕೆ ನಾವು ಸಹಾಯ ಮಾಡುತ್ತಿದ್ದೇವೆ .ಹೀಗಾಗಿ ಇನ್ನೆರಡು ದಿನಗಳಲ್ಲಿ ಪೊಲೀಸರು, ಎಸ್ಐಟಿ ಹಾಗೂ ಯಡಿಯೂರಪ್ಪ ಸರ್ಕಾರ ಆಕೆಗೆ ನ್ಯಾಯ ಕೊಡುತ್ತೆ ಅಂತ ಭಾವಿಸುತ್ತೇವೆ.
ಯುವತಿಗೆ ನಾವು ಸಹಾಯ ಮಾಡುತ್ತಿದ್ದೇವಷ್ಟೇ. ತನಿಖೆಯ ಮೂಲಕ ಸತ್ಯಾಂಶ ಹೊರಗಡೆ ಬರುತ್ತದೆ. ಕಳೆದ ಕೆಲವು ದಿನಗಳಿಂದ ವಿಡಿಯೋ ಹರಿದಾಡುತ್ತಿದೆ. ಹೀಗಾಗಿ ನಾನು ಫೇಸ್ಬುಕ್ ಮೂಲಕ ಮನವಿ ಮಾಡಿದ್ದೆ. ಕಾನೂನು ಬೆಂಬಲ ನೀಡುವುದಾಗಿ ಹೇಳಿದ್ದೆ. ನಮ್ಮನ್ನು ನಂಬಿ ಆ ಯುವತಿ ದೂರು ನೀಡಲು ಮುಂದೆ ಬಂದಿದ್ದಾರೆ. ಒಂದೆರಡು ದಿನದಲ್ಲಿ ಆ ಯುವತಿ ಮುಂದೆ ಬರಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…