ಬೆಂಗಳೂರು: ಸಂತ್ರಸ್ತೆ ಯುವತಿಗೆ ಜೀವ ಭಯ ಹಾಗೂ ಜೀವ ಬೆದರಿಕೆ ಇರುವ ಕಾರಣ, ಯುವತಿ ನನ್ನ ಮೂಲಕ ದೂರು ನೀಡುತ್ತಾಳೆಂದು ತಿಳಿಸಿದ್ದು, ಸಂತ್ರಸ್ತೆ ಯುವತಿಯೇ ಸ್ವತಃ ಬರೆದುಕೊಟ್ಟಿರುವ ದೂರನ್ನು ನಾನು ಮಧ್ಯಾಹ್ನ 2.30ಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಲ್ಲಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿ ಪರ ವಕೀಲ ಜಗದೀಶ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಸಿಡಿಯಲ್ಲಿರುವ ಯುವತಿಯ ಕಾನೂನಿನ ಸಹಾಯಕ್ಕೆ ನಾವು ಸಿದ್ದ ಎಂದು ಬಹಿರಂಗ ಹೇಳಿಕೆ ನೀಡಿದ್ದೇವು. ನನ್ನನ್ನೂ ಸೇರಿ ಎಂಟು ನ್ಯಾಯವಾದಿಗಳು ಆಕೆ ಸಹಾಯ ಮಾಡುತ್ತಿದ್ದೇವೆ. ಸಿಡಿಯಲ್ಲಿರುವ ಯುವತಿ ಸಾಮಾನ್ಯ ಮಹಿಳೆಯಾಗಿದ್ದಾರೆ..ಆಕೆ ಕೂಡ ನನಗೆ ರಕ್ಷಣೆ ಬೇಕೆಂದು ಬಹಿರಂಗವಾಗಿಯೇ ಒಂದು ವೀಡಿಯೋ ಬಿಡುಗಡೆ ಮಾಡಿದ್ದಳು ಹೀಗಾಗಿ ಆಕೆ ಪೊಲೀಸರಿಗೆ ಹೇಳಿಕೆ ನೀಡುವುದಕ್ಕೆ ನಾವು ಸಹಾಯ ಮಾಡುತ್ತಿದ್ದೇವೆ. ಇಂದು ಆಕೆಯೇ ಒಂದು ಲಿಖಿತ ದೂರು ಬರೆದು ಕಳುಹಿಸಿದ್ದಾಳೆ. ಹೀಗಾಗಿ ಆಕೆ ಪೊಲೀಸರಿಗೆ ಹೇಳಿಕೆ ನೀಡುವುದಕ್ಕೆ ನಾವು ಸಹಾಯ ಮಾಡುತ್ತಿದ್ದೇವೆ .ಹೀಗಾಗಿ ಇನ್ನೆರಡು ದಿನಗಳಲ್ಲಿ ಪೊಲೀಸರು, ಎಸ್ಐಟಿ ಹಾಗೂ ಯಡಿಯೂರಪ್ಪ ಸರ್ಕಾರ ಆಕೆಗೆ ನ್ಯಾಯ ಕೊಡುತ್ತೆ ಅಂತ ಭಾವಿಸುತ್ತೇವೆ.
ಯುವತಿಗೆ ನಾವು ಸಹಾಯ ಮಾಡುತ್ತಿದ್ದೇವಷ್ಟೇ. ತನಿಖೆಯ ಮೂಲಕ ಸತ್ಯಾಂಶ ಹೊರಗಡೆ ಬರುತ್ತದೆ. ಕಳೆದ ಕೆಲವು ದಿನಗಳಿಂದ ವಿಡಿಯೋ ಹರಿದಾಡುತ್ತಿದೆ. ಹೀಗಾಗಿ ನಾನು ಫೇಸ್ಬುಕ್ ಮೂಲಕ ಮನವಿ ಮಾಡಿದ್ದೆ. ಕಾನೂನು ಬೆಂಬಲ ನೀಡುವುದಾಗಿ ಹೇಳಿದ್ದೆ. ನಮ್ಮನ್ನು ನಂಬಿ ಆ ಯುವತಿ ದೂರು ನೀಡಲು ಮುಂದೆ ಬಂದಿದ್ದಾರೆ. ಒಂದೆರಡು ದಿನದಲ್ಲಿ ಆ ಯುವತಿ ಮುಂದೆ ಬರಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…