ಬೆಂಗಳೂರು: ಸಂತ್ರಸ್ತೆ ಯುವತಿಗೆ ಜೀವ ಭಯ ಹಾಗೂ ಜೀವ ಬೆದರಿಕೆ ಇರುವ ಕಾರಣ, ಯುವತಿ ನನ್ನ ಮೂಲಕ ದೂರು ನೀಡುತ್ತಾಳೆಂದು ತಿಳಿಸಿದ್ದು, ಸಂತ್ರಸ್ತೆ ಯುವತಿಯೇ ಸ್ವತಃ ಬರೆದುಕೊಟ್ಟಿರುವ ದೂರನ್ನು ನಾನು ಮಧ್ಯಾಹ್ನ 2.30ಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಲ್ಲಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿ ಪರ ವಕೀಲ ಜಗದೀಶ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಸಿಡಿಯಲ್ಲಿರುವ ಯುವತಿಯ ಕಾನೂನಿನ ಸಹಾಯಕ್ಕೆ ನಾವು ಸಿದ್ದ ಎಂದು ಬಹಿರಂಗ ಹೇಳಿಕೆ ನೀಡಿದ್ದೇವು. ನನ್ನನ್ನೂ ಸೇರಿ ಎಂಟು ನ್ಯಾಯವಾದಿಗಳು ಆಕೆ ಸಹಾಯ ಮಾಡುತ್ತಿದ್ದೇವೆ. ಸಿಡಿಯಲ್ಲಿರುವ ಯುವತಿ ಸಾಮಾನ್ಯ ಮಹಿಳೆಯಾಗಿದ್ದಾರೆ..ಆಕೆ ಕೂಡ ನನಗೆ ರಕ್ಷಣೆ ಬೇಕೆಂದು ಬಹಿರಂಗವಾಗಿಯೇ ಒಂದು ವೀಡಿಯೋ ಬಿಡುಗಡೆ ಮಾಡಿದ್ದಳು ಹೀಗಾಗಿ ಆಕೆ ಪೊಲೀಸರಿಗೆ ಹೇಳಿಕೆ ನೀಡುವುದಕ್ಕೆ ನಾವು ಸಹಾಯ ಮಾಡುತ್ತಿದ್ದೇವೆ. ಇಂದು ಆಕೆಯೇ ಒಂದು ಲಿಖಿತ ದೂರು ಬರೆದು ಕಳುಹಿಸಿದ್ದಾಳೆ. ಹೀಗಾಗಿ ಆಕೆ ಪೊಲೀಸರಿಗೆ ಹೇಳಿಕೆ ನೀಡುವುದಕ್ಕೆ ನಾವು ಸಹಾಯ ಮಾಡುತ್ತಿದ್ದೇವೆ .ಹೀಗಾಗಿ ಇನ್ನೆರಡು ದಿನಗಳಲ್ಲಿ ಪೊಲೀಸರು, ಎಸ್ಐಟಿ ಹಾಗೂ ಯಡಿಯೂರಪ್ಪ ಸರ್ಕಾರ ಆಕೆಗೆ ನ್ಯಾಯ ಕೊಡುತ್ತೆ ಅಂತ ಭಾವಿಸುತ್ತೇವೆ.
ಯುವತಿಗೆ ನಾವು ಸಹಾಯ ಮಾಡುತ್ತಿದ್ದೇವಷ್ಟೇ. ತನಿಖೆಯ ಮೂಲಕ ಸತ್ಯಾಂಶ ಹೊರಗಡೆ ಬರುತ್ತದೆ. ಕಳೆದ ಕೆಲವು ದಿನಗಳಿಂದ ವಿಡಿಯೋ ಹರಿದಾಡುತ್ತಿದೆ. ಹೀಗಾಗಿ ನಾನು ಫೇಸ್ಬುಕ್ ಮೂಲಕ ಮನವಿ ಮಾಡಿದ್ದೆ. ಕಾನೂನು ಬೆಂಬಲ ನೀಡುವುದಾಗಿ ಹೇಳಿದ್ದೆ. ನಮ್ಮನ್ನು ನಂಬಿ ಆ ಯುವತಿ ದೂರು ನೀಡಲು ಮುಂದೆ ಬಂದಿದ್ದಾರೆ. ಒಂದೆರಡು ದಿನದಲ್ಲಿ ಆ ಯುವತಿ ಮುಂದೆ ಬರಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…