ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ.
ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಹಾಗೂ ಚಿತ್ರೋದ್ಯಮದ ಗಣ್ಯರು ಆಗಮಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…