Featured

ಮನಮೋಹನ್​ ಸಿಂಗ್​ ಅವರಿಗೆ ನೀಡಲಾಗಿದ್ದ ಎಸ್​ಪಿಜಿ ಶ್ರೇಣಿಯ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರ್ಕಾರ -Vishwanews24

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಉನ್ನತ ವಿಶೇಷ ಭದ್ರತಾ ದಳ(ಎಸ್‌ಪಿಜಿ)ವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.

ಪ್ರಮುಖ ವ್ಯಕ್ತಿಗಳಿಗೆ ನೀಡಿದ ಭದ್ರತೆಯನ್ನು ಅವರ ಸ್ಥಾನದ ಆಧಾರದ ಮೇಲೆ ಹಾಗೂ ಅವರಿಗೆ ಇರುವ ಬೆದರಿಕೆಯ ಪ್ರಮಾಣ ಆಧರಿಸಿ ನಿಯತಕಾಲಿಕವಾಗಿ ಬದಲಾವಣೆ ಮಾಡಲಾಗುತ್ತದೆ. ಈ ಬಾರಿ ಮರುಪರೀಶೀಲನೆ ಮಾಡಿದ ಸಂದರ್ಭ ಮನಮೋಹನ್​ ಸಿಂಗ್​ ಅವರಿಗೆ ಅಗತ್ಯವಿರುವ ಭದ್ರತೆ ಪ್ರಮಾಣದ ಮೌಲ್ಯಮಾಪನವನ್ನು ತಜ್ಞರು ಮಾಡಿದ್ದು ಅದರ ಅನ್ವಯ ಅವರ ಭದ್ರತೆಯನ್ನು ಎಸ್​ಪಿಜಿಯಿಂದ Z+ಗೆ ಇಳಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಮನಮೋಹನ್​ ಸಿಂಗ್​ ರಕ್ಷಣೆಗೆ ಸಿಆರ್​ಪಿಎಫ್​ ಸಿಬ್ಬಂದಿ ನಿಯೋಜಿಸಲ್ಪಡುತ್ತಾರೆ.

ದೇಶದ ಪ್ರಮುಖ ಹುದ್ದೆಗಳಲ್ಲಿ ಇರುವ ಆಯ್ದ ಗಣ್ಯ ವ್ಯಕ್ತಿಗಳಿಗೆ ಎಸ್​ಪಿಜಿ ಭದ್ರತೆ ಒದಗಿಸಲಾಗುತ್ತದೆ. ಈ ಭದ್ರತೆಯನ್ನು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗುತ್ತಿದೆ. ಪ್ರಮುಖ ವ್ಯಕ್ತಿಗಳಿಗೆ ನೀಡಿದ ಭದ್ರತೆಯನ್ನು ಅವರ ಸ್ಥಾನದ ಆಧಾರದ ಮೇಲೆ ಹಾಗೂ ಅವರಿಗೆ ಇರುವ ಬೆದರಿಕೆಯ ಪ್ರಮಾಣ ಆಧರಿಸಿ ನಿಯತಕಾಲಿಕವಾಗಿ ಬದಲಾವಣೆ ಮಾಡಲಾಗುತ್ತದೆ.

ಸಿಂಗ್ ಅವರಿಗೆ ಇರುವ ರಕ್ಷಣಾ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಯಾರಿಗೆ, ಎಷ್ಟು ಭದ್ರತೆ ನೀಡಬೇಕು ಅನ್ನೋದನ್ನ ಆಯಾ ಸಂಸ್ಥೆಗಳು ವೃತ್ತಿಪರವಾಗಿ ಚರ್ಚಿಸಿ ಕೈಗೊಂಡಿರುವ ನಿರ್ಧಾರ ಇದಾಗಿದೆ.

 

Vishwa News 24

Recent Posts

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

37 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

46 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago