Featured

ಮನಮೋಹನ್​ ಸಿಂಗ್​ ಅವರಿಗೆ ನೀಡಲಾಗಿದ್ದ ಎಸ್​ಪಿಜಿ ಶ್ರೇಣಿಯ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರ್ಕಾರ -Vishwanews24

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಉನ್ನತ ವಿಶೇಷ ಭದ್ರತಾ ದಳ(ಎಸ್‌ಪಿಜಿ)ವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.

ಪ್ರಮುಖ ವ್ಯಕ್ತಿಗಳಿಗೆ ನೀಡಿದ ಭದ್ರತೆಯನ್ನು ಅವರ ಸ್ಥಾನದ ಆಧಾರದ ಮೇಲೆ ಹಾಗೂ ಅವರಿಗೆ ಇರುವ ಬೆದರಿಕೆಯ ಪ್ರಮಾಣ ಆಧರಿಸಿ ನಿಯತಕಾಲಿಕವಾಗಿ ಬದಲಾವಣೆ ಮಾಡಲಾಗುತ್ತದೆ. ಈ ಬಾರಿ ಮರುಪರೀಶೀಲನೆ ಮಾಡಿದ ಸಂದರ್ಭ ಮನಮೋಹನ್​ ಸಿಂಗ್​ ಅವರಿಗೆ ಅಗತ್ಯವಿರುವ ಭದ್ರತೆ ಪ್ರಮಾಣದ ಮೌಲ್ಯಮಾಪನವನ್ನು ತಜ್ಞರು ಮಾಡಿದ್ದು ಅದರ ಅನ್ವಯ ಅವರ ಭದ್ರತೆಯನ್ನು ಎಸ್​ಪಿಜಿಯಿಂದ Z+ಗೆ ಇಳಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಮನಮೋಹನ್​ ಸಿಂಗ್​ ರಕ್ಷಣೆಗೆ ಸಿಆರ್​ಪಿಎಫ್​ ಸಿಬ್ಬಂದಿ ನಿಯೋಜಿಸಲ್ಪಡುತ್ತಾರೆ.

ದೇಶದ ಪ್ರಮುಖ ಹುದ್ದೆಗಳಲ್ಲಿ ಇರುವ ಆಯ್ದ ಗಣ್ಯ ವ್ಯಕ್ತಿಗಳಿಗೆ ಎಸ್​ಪಿಜಿ ಭದ್ರತೆ ಒದಗಿಸಲಾಗುತ್ತದೆ. ಈ ಭದ್ರತೆಯನ್ನು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗುತ್ತಿದೆ. ಪ್ರಮುಖ ವ್ಯಕ್ತಿಗಳಿಗೆ ನೀಡಿದ ಭದ್ರತೆಯನ್ನು ಅವರ ಸ್ಥಾನದ ಆಧಾರದ ಮೇಲೆ ಹಾಗೂ ಅವರಿಗೆ ಇರುವ ಬೆದರಿಕೆಯ ಪ್ರಮಾಣ ಆಧರಿಸಿ ನಿಯತಕಾಲಿಕವಾಗಿ ಬದಲಾವಣೆ ಮಾಡಲಾಗುತ್ತದೆ.

ಸಿಂಗ್ ಅವರಿಗೆ ಇರುವ ರಕ್ಷಣಾ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಯಾರಿಗೆ, ಎಷ್ಟು ಭದ್ರತೆ ನೀಡಬೇಕು ಅನ್ನೋದನ್ನ ಆಯಾ ಸಂಸ್ಥೆಗಳು ವೃತ್ತಿಪರವಾಗಿ ಚರ್ಚಿಸಿ ಕೈಗೊಂಡಿರುವ ನಿರ್ಧಾರ ಇದಾಗಿದೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago