Featured

ಮನಮೋಹನ್​ ಸಿಂಗ್​ ಅವರಿಗೆ ನೀಡಲಾಗಿದ್ದ ಎಸ್​ಪಿಜಿ ಶ್ರೇಣಿಯ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರ್ಕಾರ -Vishwanews24

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಉನ್ನತ ವಿಶೇಷ ಭದ್ರತಾ ದಳ(ಎಸ್‌ಪಿಜಿ)ವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.

ಪ್ರಮುಖ ವ್ಯಕ್ತಿಗಳಿಗೆ ನೀಡಿದ ಭದ್ರತೆಯನ್ನು ಅವರ ಸ್ಥಾನದ ಆಧಾರದ ಮೇಲೆ ಹಾಗೂ ಅವರಿಗೆ ಇರುವ ಬೆದರಿಕೆಯ ಪ್ರಮಾಣ ಆಧರಿಸಿ ನಿಯತಕಾಲಿಕವಾಗಿ ಬದಲಾವಣೆ ಮಾಡಲಾಗುತ್ತದೆ. ಈ ಬಾರಿ ಮರುಪರೀಶೀಲನೆ ಮಾಡಿದ ಸಂದರ್ಭ ಮನಮೋಹನ್​ ಸಿಂಗ್​ ಅವರಿಗೆ ಅಗತ್ಯವಿರುವ ಭದ್ರತೆ ಪ್ರಮಾಣದ ಮೌಲ್ಯಮಾಪನವನ್ನು ತಜ್ಞರು ಮಾಡಿದ್ದು ಅದರ ಅನ್ವಯ ಅವರ ಭದ್ರತೆಯನ್ನು ಎಸ್​ಪಿಜಿಯಿಂದ Z+ಗೆ ಇಳಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಮನಮೋಹನ್​ ಸಿಂಗ್​ ರಕ್ಷಣೆಗೆ ಸಿಆರ್​ಪಿಎಫ್​ ಸಿಬ್ಬಂದಿ ನಿಯೋಜಿಸಲ್ಪಡುತ್ತಾರೆ.

ದೇಶದ ಪ್ರಮುಖ ಹುದ್ದೆಗಳಲ್ಲಿ ಇರುವ ಆಯ್ದ ಗಣ್ಯ ವ್ಯಕ್ತಿಗಳಿಗೆ ಎಸ್​ಪಿಜಿ ಭದ್ರತೆ ಒದಗಿಸಲಾಗುತ್ತದೆ. ಈ ಭದ್ರತೆಯನ್ನು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗುತ್ತಿದೆ. ಪ್ರಮುಖ ವ್ಯಕ್ತಿಗಳಿಗೆ ನೀಡಿದ ಭದ್ರತೆಯನ್ನು ಅವರ ಸ್ಥಾನದ ಆಧಾರದ ಮೇಲೆ ಹಾಗೂ ಅವರಿಗೆ ಇರುವ ಬೆದರಿಕೆಯ ಪ್ರಮಾಣ ಆಧರಿಸಿ ನಿಯತಕಾಲಿಕವಾಗಿ ಬದಲಾವಣೆ ಮಾಡಲಾಗುತ್ತದೆ.

ಸಿಂಗ್ ಅವರಿಗೆ ಇರುವ ರಕ್ಷಣಾ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಯಾರಿಗೆ, ಎಷ್ಟು ಭದ್ರತೆ ನೀಡಬೇಕು ಅನ್ನೋದನ್ನ ಆಯಾ ಸಂಸ್ಥೆಗಳು ವೃತ್ತಿಪರವಾಗಿ ಚರ್ಚಿಸಿ ಕೈಗೊಂಡಿರುವ ನಿರ್ಧಾರ ಇದಾಗಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago