ಬೆಂಗಳೂರು: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಉದ್ಯಮಿಗಳ 7 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಆ ಪೈಕಿ ಅದಾನಿ ಅವರದ್ದೇ 4.50 ಲಕ್ಷ ಕೋಟಿ ರೂ. ಎನ್ ಪಿಎ ಇದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಜಗತ್ತಿನ ಅಭಿವೃದ್ದಿ ಹೊಂದುವ ವೇಗದ ದೇಶಗಳಲ್ಲಿ ಭಾರತ 5ನೇ ಸ್ಥಾನದಲ್ಲಿತ್ತು. ಈಗ 193 ದೇಶಗಳ ಸಾಲಿನಲ್ಲಿ 164 ನೇ ಸ್ಥಾನ ಗಳಿಸಿದೆ. ಭಾರತಕ್ಕಿಂತ ಬಾಂಗ್ಲಾ ಜಿಡಿಪಿ ಏರುತ್ತಿದೆ. ಬಿಜೆಪಿ ಸರ್ಕಾರ ಕಾರ್ಪೊರೇಟ್ ಕುಳಗಳನ್ನು ಬದುಕಿಸಲು ಟೊಂಕ ಕಟ್ಟಿ ನಿಂತಿದೆ. ಅದಕ್ಕಾಗಿ ದೇಶದ ಆಸ್ತಿ ಮಾರಾಟ ಮಾಡಲಾಗುತ್ತಿದೆ ಎಂದರು.
7 ವರ್ಷದಲ್ಲಿ ಪೆಟ್ರೊಲ್, ಡೀಸೆಲ್, ಅಡುಗೆ ಅನಿಲದಿಂದ ಹೆಚ್ಚುವರಿ ತೆರಿಗೆ 22 ಲಕ್ಷ ಕೋಟಿ ಸಂಗ್ರಹವಾಗಿದೆ. ಕರ್ನಾಟಕದಿಂದ 1.20 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಕಾಂಗ್ರೆಸ್ ಸರ್ಕಾರ ಮಾಡಿದ್ದ ಸಾಲ ತೀರಿಸಬೇಕು ಅಂದಿದ್ದರು. ಆದರೆ ಸಾಲ ಇದ್ದದ್ದು 7 ಲಕ್ಷ ಕೋಟಿ, ಹೆಚ್ಚುವರಿ ತೆರಿಗೆ ಸಂಗ್ರಹ ಆಗುದ್ದು 22 ಲಕ್ಷ ಕೋಟಿ. ಈಗಲಾದರೂ ತೆರಿಗೆ ಕಡಿಮೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದರು.
ಅಗತ್ಯ ವಸ್ತುಗಳ ಬೆಲೆ ಯದ್ವಾತದ್ವಾ ಹೆಚ್ಚಾಗಿದೆ. ಇಷ್ಟಾದರೂ ಅಚ್ಛೇ ದಿನ್ ಎನ್ನುತ್ತಿದ್ದಾರೆ. ಮೋದಿ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ: ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದ ನಟಿ ಪೂಜಾ ಹೆಗ್ಡೆ…
ಕೌಟುಂಬಿಕ ಕಲಹ : ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್ಪೆಕ್ಟರ್ …
ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ ದಕ್ಷಿಣ ಕನ್ನಡ : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ…
ಉಡುಪಿ: ಕರ್ನಾಟಕ ಲಲಿತಕಲಾ ಅಕಾಡೆಮಿಯ ವರ್ಣಶ್ರೀ ಪ್ರಶಸ್ತಿಗೆ ಉಡುಪಿಯ ಪುಸಿದ್ಧ ಛಾಯಾಗ್ರಾಹಕ ಫೋಕಸ್ ರಾಘು ಆಯ್ಕೆ ಉಡುಪಿ: ಕರ್ನಾಟಕ ಲಲಿತಕಲಾ…
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…